Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...