Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...