Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...