Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...