Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...