Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...