Homeಮುಖಪುಟ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ಅವರು, “ನಾನು ಮುಂದೆ ಮಾಡುವ ಭಾಷಣಗಳ ಕುರಿತು ಪ್ರಧಾನಿ ನರೇಂದ್ರಮೋದಿಯವರು ಭಯಭೀತರಾಗಿದ್ದಾರೆ” ಎಂದಿದ್ದಾರೆ.

ಇದರ ನಡುವೆ, ಬಿಜೆಪಿಯು ರಾಹುಲ್ ಅವರ ಮೇಲಿನ ದಾಳಿಯನ್ನು ದ್ವಿಗುಣಗೊಳಿಸಿದೆ. “ಚುನಾವಣಾ ಲಾಭಕ್ಕಾಗಿ ರಾಹುಲ್ ಅವರ ಹೆಸರನ್ನು ಬಳಸಿಕೊಂಡು ಪ್ರಚಾರ ಮಾಡಲು ಕಾಂಗ್ರೆಸ್‌ ಯೋಚಿಸಿದೆ” ಎಂದು ಬಿಜೆಪಿ ಆರೋಪಿಸಿದೆ.

ಲಂಡನ್‌ನಲ್ಲಿ ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮುಂದಿನ ಭಾಷಣಗಳಿಗೆ ಪ್ರಧಾನಿ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಬಯಸಿದ್ದರು ಎಂಬ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. “ಲಂಡನ್ ಪ್ರವಾಸದ ವೇಳೆ ನೀಡಿದ ಹೇಳಿಕೆಗಳಿಗೆ ಬಂದಿರುವ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರನ್ನು ಕೇಳಿದ್ದೆನು” ಎಂದಿದ್ದಾರೆ ರಾಹುಲ್‌.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

“ನನಗೆ ಒಂದೇ ಒಂದು ಇದೆ. ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನವಿಡೀ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಅದಕ್ಕಾಗಿ ಮುನ್ನಡೆಯುತ್ತೇನೆ” ಎಂದು ಗುಡುಗಿದ್ದಾರೆ.

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್‌ ಗಾಂಧಿ.

ಮೋದಿ ಉಪನಾಮವನ್ನು ಬಳಸಿ ರಾಹುಲ್ ಗಾಂಧಿಯವರು ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...