Homeಮುಖಪುಟ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ಅವರು, “ನಾನು ಮುಂದೆ ಮಾಡುವ ಭಾಷಣಗಳ ಕುರಿತು ಪ್ರಧಾನಿ ನರೇಂದ್ರಮೋದಿಯವರು ಭಯಭೀತರಾಗಿದ್ದಾರೆ” ಎಂದಿದ್ದಾರೆ.

ಇದರ ನಡುವೆ, ಬಿಜೆಪಿಯು ರಾಹುಲ್ ಅವರ ಮೇಲಿನ ದಾಳಿಯನ್ನು ದ್ವಿಗುಣಗೊಳಿಸಿದೆ. “ಚುನಾವಣಾ ಲಾಭಕ್ಕಾಗಿ ರಾಹುಲ್ ಅವರ ಹೆಸರನ್ನು ಬಳಸಿಕೊಂಡು ಪ್ರಚಾರ ಮಾಡಲು ಕಾಂಗ್ರೆಸ್‌ ಯೋಚಿಸಿದೆ” ಎಂದು ಬಿಜೆಪಿ ಆರೋಪಿಸಿದೆ.

ಲಂಡನ್‌ನಲ್ಲಿ ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮುಂದಿನ ಭಾಷಣಗಳಿಗೆ ಪ್ರಧಾನಿ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಬಯಸಿದ್ದರು ಎಂಬ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. “ಲಂಡನ್ ಪ್ರವಾಸದ ವೇಳೆ ನೀಡಿದ ಹೇಳಿಕೆಗಳಿಗೆ ಬಂದಿರುವ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರನ್ನು ಕೇಳಿದ್ದೆನು” ಎಂದಿದ್ದಾರೆ ರಾಹುಲ್‌.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

“ನನಗೆ ಒಂದೇ ಒಂದು ಇದೆ. ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನವಿಡೀ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಅದಕ್ಕಾಗಿ ಮುನ್ನಡೆಯುತ್ತೇನೆ” ಎಂದು ಗುಡುಗಿದ್ದಾರೆ.

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್‌ ಗಾಂಧಿ.

ಮೋದಿ ಉಪನಾಮವನ್ನು ಬಳಸಿ ರಾಹುಲ್ ಗಾಂಧಿಯವರು ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...