Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...