Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...