Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....