Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...