Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....