Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...