Homeನಿಜವೋ ಸುಳ್ಳೋಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು...

ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ.

“ಮುಂಬೈ ಸ್ಲಮ್ ಬೀದಿಯಲ್ಲಿ ನಡುರಾತ್ರಿ ಸಮಯದಲ್ಲಿ ಟ್ರಕ್ ಒಂದರಲ್ಲಿ ಮೈದಾ ಹಿಟ್ಟು ತುಂಬಿಕೊಂಡು ಬಂದ ವ್ಯಕ್ತಿಯೋರ್ವನು “ಯಾರಿಗೆ ಮೈದಾ ಹಿಟ್ಟಿನ ಅಗತ್ಯವಿದೆಯೋ ಅವರಿಗಾಗಿ ನಾನು ಹಿಟ್ಟು ತಂದಿರುವೆನು. ಆದರೆ ಓರ್ವ ವ್ಯಕ್ತಿಗೆ ಕೇವಲ ಒಂದು ಕಿಲೋ ಮೈದಾ ಹಿಟ್ಟು ಮಾತ್ರ ಕೊಡಲಾಗುವುದು’ ಎಂದು ಜನರನ್ನು ಕೂಗಿ ಕರೆಯತೊಡಗುತ್ತಾನೆ. ಹೊಟ್ಟೆಗೆ ಅನ್ನವಿಲ್ಲದೇ ಹಸಿವಿನಿಂದ ಪರಿತಪಿಸುತ್ತಿದ್ದ ಕೆಲವು ಜನರು ಅವನತ್ತ ಓಡ ತೊಡಗಿದರು. ಹೊಟ್ಚೆ ತುಂಬಿದ ಇನ್ನೂ ಕೆಲವರು ‘ಕೇವಲ ಒಂದು ಕಿಲೋ ಮೈದಾ ಹಿಟ್ಟಲ್ವಾ , ಹೋಗಲಿ’ ಎಂದೇಳುತ್ತಾ ತಮ್ಮ ಜೋಪಡಿಗಳಲ್ಲೇ ಕುಳಿತರು”.

ಹಸಿದ ಹೊಟ್ಟೆಗಳು ಆ ಒಂದು ಕಿಲೋ ಹಿಟ್ಟನ್ನು ಪಡೆದುಕೊಂಡು ಖುಷಿಯಿಂದ ಮನೆಯತ್ತ ಹೊರಟವು. ಮನೆಯಲ್ಲಿ ಹಿಟ್ಟಿನ ಪ್ಯಾಕೆಟ್ ತೆರೆದು ನೋಡಿದಾಗ ಅದರೊಳಗೆ 15000 ರೂಪಾಯಿಗಳನ್ನೂ ಇಡಲಾಗಿತ್ತಂತೆ.
ಇದು ಕತೆಯಲ್ಲ. ಮುಂಬೈಯಲ್ಲಿ ನಡೆದ ನಿಜ ಘಟನೆ ಎನ್ನಲಾಗುತ್ತಿದೆ. ಈ ಘಟನೆಯ ನಾಯಕ ಸಿನಿಮಾ ನಟ ಆಮೀರ್ ಖಾನ್ ಎಂದು ಹೇಳಲಾಗುತ್ತಿದೆ. ಈ ಸುದ್ಧಿಯ ಸತ್ಯಾಸತ್ಯತೆ ಅದೇನಿದ್ದರೂ ಉದ್ದೇಶ ಮಾತ್ರ ಮೆಚ್ಚುವಂತದ್ದು. ದಾನ ಮಾಡಿದ ಕೈ ಯಾರದ್ದೆಂದು ಪಡೆದವರಿಗೆ ತಿಳಿದಿಲ್ಲ, ದಾನವನ್ನು ಪಡೆದ ಜನರು ಯಾರೆಂದು ನೀಡಿದವನಿಗೂ ಗೊತ್ತಿಲ್ಲ. ದಾನದ ಉದ್ದೇಶ ಈಡೇರಿತ್ತು. ದಾನ ತಲುಪಬೇಕಾದ ಕೈಗಳಿಗೇ ತಲುಪಿತ್ತು. ಇದರಲ್ಲಿ ಪ್ರಚಾರವಿಲ್ಲ, ಕ್ಯಾಮೆರಾ ಇಲ್ಲ. ಕೇವಲ ನಿಸ್ವಾರ್ಥತೆಯ ದಾನ ಮಾತ್ರ. ಕಿಟ್ ಗಳನ್ನು ಹೀಗೂ ವಿತರಿಸಬಹುದು.

ಈಗ ಈ ಸುದ್ದಿಯ ಅಸಲಿಯತ್ತಿಗೆ ಬರೋಣ. ಮೊದಲಿಗೆ ಈ ರೀತಿ ಮೈದಾ ಹಿಟ್ಟಿನ ಪ್ಯಾಕೆಟ್‌ ನಮಗೆ ಸಿಕ್ಕಿತ್ತು. ಅದರಲ್ಲಿ 15 ಸಾವಿರ ಹಣವಿತ್ತು ಇದುವರೆಗೂ ಯಾರು ಮುಂದೆ ಬಂದು ಹೇಳಿಲ್ಲ. ಆದರೂ ಈ ಸಂದೇಶ ಮಾತ್ರ ವೈರಲ್‌ ಆಗಿತ್ತು. ಇದು ಶುದ್ದ ಸುಳ್ಳು. ಹೀಗಂತಾ ಹೇಳಿದವರು ಯಾರು ಗೊತ್ತೆ? ಬೇರ್‍ಯಾರೂ ಅಲ್ಲ ಸ್ವತಃ ಅಮೀರ್‌ ಖಾನ್‌!

ನಿಮಗೆ ಸಂದೇಹವೇ ಹಾಗಾದರೆ ಈ ಕೆಳಗಿನ ಅವರ ಟ್ವೀಟ್‌ ನೋಡಿ.

ಸ್ನೇಹಿತರೆ, ಮೈದಾ ಹಿಟ್ಟಿನಲ್ಲಿ ಹಣ ಹಂಚಿದ್ದು ನಾನಲ್ಲ. ಇದು ಸಂಪೂರ್ಣ ಸುಳ್ಳು ಸುದ್ದಿ. ಅಥವಾ ರಾಬಿನ್ ಹುಡ್ ತನ್ನನ್ನು ಬಹಿರಂಗಪಡಿಸಲು ಬಯಸುವುದಿಲ್ಲವೆನೋ! ಮನೆಯಲ್ಲಿಯೇ ಇರಿ, ಪ್ರಿತಿಯಿಂದ ಅಮೀರ್‌ಖಾನ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮೊದಲು ಈ ಸುದ್ದಿ ನಿಜವೇ ಸುಳ್ಳೇ ಎಂದು ತಿಳಿಯಲು ಸಾಕಷ್ಟು ಹರಸಾಹಸಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ಈಗ ಅಮೀರ್‌ ಖಾನ್‌ರವರೆ ಟ್ವೀಟ್‌ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...