Homeಮುಖಪುಟ'ನಾನು ದಣಿದಿಲ್ಲ, ನಿವೃತ್ತಿಯಾಗಿಲ್ಲ': ಅಜಿತ್ ಹೇಳಿಕೆಗೆ ಶರದ್ ಪವಾರ್ ತಿರುಗೇಟು

‘ನಾನು ದಣಿದಿಲ್ಲ, ನಿವೃತ್ತಿಯಾಗಿಲ್ಲ’: ಅಜಿತ್ ಹೇಳಿಕೆಗೆ ಶರದ್ ಪವಾರ್ ತಿರುಗೇಟು

- Advertisement -
- Advertisement -

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರಿಗೆ ವಯಸ್ಸಾಗಿದೆ ಅವರಿನ್ನು ನಿವೃತ್ತಿ ಪಡೆಯಬಹುದು ಎಂಬ ಅಜಿತ್ ಪವಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶರದ್ ಪವಾರ್, ವಾಜಪೇಯಿ ಮಾತನ್ನು ಉಲ್ಲೇಖಿಸಿ ನಾನು ದಣಿದಿಲ್ಲ, ನಿವೃತ್ತಿಯಾಗಿಲ್ಲ ಎಂದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಪಕ್ಷದ ನಾಯಕತ್ವವನ್ನು ಅಡ್ವಾಣಿ ಅವರಿಗೆ ವರ್ಗಾಯಿಸಿದಾಗ ”ನಾನು ದಣಿದಿಲ್ಲ, ನಿವೃತ್ತಿ ಹೊಂದಿಲ್ಲ ಆದರೆ ಈಗ ಅಡ್ವಾಣಿ ನೇತೃತ್ವದಲ್ಲಿ ಗೆಲುವಿನತ್ತ ಮುನ್ನಡೆಯಬೇಕು ಎಂದು ಹೇಳಿದ್ದರು” ಎಂದು ಶರದ್ ಪವಾರ್ ವಾಜಪೇಯಿ ಮಾತುಗಳನ್ನು ಶರದ್ ಪವಾರ್ ನೆನೆದಿದ್ದಾರೆ.

”ಎಲ್ಲರ ಮುಂದೆ ನನ್ನನ್ನು ಖಳನಾಯಕನನ್ನಾಗಿ ಬಿಂಬಿಸಿದ್ದೀರಿ. ಅವರ (ಶರದ್ ಪವಾರ್) ಬಗ್ಗೆ ನನಗೆ ಇನ್ನೂ ಅತೀವ ಗೌರವವಿದೆ. ಆದರೆ ನೀವು ಹೇಳಿ, ಐಎಎಸ್ ಅಧಿಕಾರಿಗಳು 60 ವರ್ಷಕ್ಕೆ ನಿವೃತ್ತಿ ಹೊಂದುತ್ತಾರೆ. ರಾಜಕೀಯದಲ್ಲಿಯೂ ಬಿಜೆಪಿ ನಾಯಕರು 75ನೇ ವಯಸ್ಸಿನಲ್ಲಿ ನಿವೃತ್ತಿ ಹೊಂದುತ್ತಾರೆ. ನೀವು ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಉದಾಹರಣೆಯನ್ನು ನೋಡಬಹುದು. ಅದು ಹೊಸ ಪೀಳಿಗೆಯನ್ನು ಏರಲು ಅನುವು ಮಾಡಿಕೊಡುತ್ತದೆ” ಎಂದು ಅಜಿತ್ ಪವಾರ್ ಹೇಳಿದ್ದರು.

ಅಜಿತ್ ಪವಾರ್‌ ಹೇಳಿಕೆಗೆ ತಿರುಗೇಟು ನೀಡಿದ ಶರದ್ ಪವಾರ್, ”ನನ್ನ ವಯಸ್ಸು 82 ಅಥವಾ 92 ಆಗಿರಲಿ ನಾನು ಇನ್ನೂ ಚುರುಕಾಗಿಯೇ ಇದ್ದೇನೆ ಎಂದು ಹೇಳಿದ್ದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊರಾರ್ಜಿ ದೇಸಾಯಿ ಅವರು ಯಾವ ವಯಸ್ಸಿನಲ್ಲಿ ಪ್ರಧಾನಿ ಆದರು ಎಂಬುದು ಗೊತ್ತಿದೆಯೇ? ನಾನು ಪ್ರಧಾನಿ ಆಗಲು ಅಥವಾ ಸಚಿವನಾಗಲು ಬಯಸುವುದಿಲ್ಲ. ಜನ ಸೇವೆಯೊಂದೇ ನನ್ನ ದ್ವೇಯ’ ಎಂದಿದ್ದಾರೆ.

‘ನನಗೆ ನಿವೃತ್ತಿಯ ಸಲಹೆ ನೀಡಲು ಅವರು ಯಾರು? ನಾನು ಇನ್ನೂ ದುಡಿಯಬಲ್ಲೆ’ ಎಂದು ಮುಂಬೈ ಟಾಕ್‌ಗೆ ನೀಡಿದ ಸಂದರ್ಶನದಲ್ಲಿ ಪವಾರ್ ಗುಡುಗಿದ್ದಾರೆ.

ತಮ್ಮ ಪುತ್ರನಲ್ಲ ಎಂಬ ಕಾರಣಕ್ಕೆ ನನ್ನನ್ನು ಶರದ ಕಡೆಗಣಿಸಿದರು ಎಂಬ ಅಜಿತ್‌ ಪವಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ”ಕುಟುಂಬದ ವಿಷಯವನ್ನು ನಾನು ಹೊರಗೆ ಚರ್ಚಿಸಲು ಬಯಸುವುದಿಲ್ಲ. ಅಜಿತ್‌ ಪವಾರ್‌ ಅವರು ಮಂತ್ರಿ, ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಆದರೆ ಮಗಳು ಸುಪ್ರಿಯಾ ಸುಳೆಗೆ ಯಾವುದೇ ಮಂತ್ರಿ ಹುದ್ದೆ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಅಸ್ಥಿರತೆ: ಶರದ್ ಪವಾರ್ ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...