Homeಮುಖಪುಟದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

"ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ" ಎಂದಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ. ಕಫೀಲ್ ಖಾನ್ ತಡರಾತ್ರಿ ಬಿಡುಗಡೆಯಾಗಿದ್ದು, ನಂತರ ಮಾತನಾಡಿದ ಅವರು ‘ನನ್ನ ವೈದ್ಯ ಹುದ್ದೆಯನ್ನು ಮರಳಿಕೊಡಿ, ದೇಶಸೇವೆಗೆ ಸಿದ್ಧನಿದ್ದೇನೆ’ ಎಂದು ಘೋಷಿಸಿದ್ದಾರೆ.

ಮಥರು ಜೈಲಿನಿಂದ ಬಿಡುಗಡೆಗೊಂಡ ಅವರು, “ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ” ಎಂದಿದ್ದಾರೆ.

ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ನಿನ್ನೆ ಆದೇಶಿಸಿತ್ತು.

ಏನೂ ಅಪರಾಧ ಮಾಡದ ನನ್ನ ಮಗನನ್ನು 8 ತಿಂಗಳು ಜೈಲಿನಲ್ಲಿ ಕೂಡಿ ಹಾಕಲಾಯಿತು. ಇಂದು ಕೊನೆಗೂ ಆತನನ್ನು ಮುಟ್ಟುವ, ಅಪ್ಪುವ ಅವಕಾಶ ನಮಗೆ ಸಿಕ್ಕಿದೆ ಎಂದು ಅವರ ತಾಯಿ ತಿಳಿಸಿದ್ದಾರೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆ ಆಕ್ಸಿಜನ್ ಕೊರತೆ ದುರಂತ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು. ಆದರೂ ಉತ್ತರ ಪ್ರದೇಶದ ಯೋಗಿ ಸರ್ಕಾರ ಡಾ.ಕಫೀಲ್ ಖಾನ್‌ ಮೇಲೆ ಮರು ತನಿಖೆ ನಡೆಸುವುದಾಗಿ ಹೇಳಿದೆ.

ಈಗಲೂ ಸಹ ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಒಬ್ಬ ಜನಾನುರಾಗಿ ಯುವ ವೈದ್ಯನ ವಿರುದ್ಧ ಕ್ಲುಲಕ ವಿಚಾರಗಳನ್ನಿಟ್ಟುಕೊಂಡು, ಆತ ಅನ್ಯ ಧರ್ಮೀಯ ಎಂಬ ಕಾರಣಕ್ಕೆ ಯೋಗಿ ಸರ್ಕಾರವು ಇಲ್ಲಸಲ್ಲದ ಕೇಸುಗಳನ್ನು ಹಾಕಿ ಜೈಲಿಗೆ ಅಟ್ಟುತ್ತಿದೆ ಎಂದು ಆರೋಪ ಪ್ರಗತಿಪರ ವಲಯದಲ್ಲಿ ಕೇಳಿಬಂದಿದೆ.

ಈಗ ಬಿಡುಗಡೆಯಾಗಿರುವ ಕಫೀಲ್ ಖಾನ್ ದೇಶಸೇವೆ ಸಿದ್ದನಿರುವುದಾಗಿ ಘೋಸಿಷಿದ್ದಾರೆ. ಜನವರಿಯಲ್ಲಿಯೂ ಸಹ ಕೊರೊನಾ ಪ್ರಕರಣಗಳು ಆರಂಭವಾಗಿದ್ದಾಗ ತಾನು ವೈದ್ಯನಾಗಿ ಕೊರೊನಾ ವಿರುದ್ಧ ಕೆಲಸ ಮಾಡುತ್ತೇನೆ ಎಂದು ಕಫೀಲ್ ಖಾನ್ ಹೇಳಿದ್ದರು.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

Also Read: Dr. Kafeel Khan released at midnight: thankful to Judiciary and people of India

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...