Homeಮುಖಪುಟಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, "ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ" ಎಂದಿದ್ದಾರೆ.

- Advertisement -
- Advertisement -

ಕೇಂದ್ರದ 3 ವಿವಾದಾತ್ಮಕ ಕಾಯ್ದೆಗಳನ್ನು ಮತ್ತೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಕೈ ಮುಗಿದು, ತಲೆಬಾಗಿ ರೈತರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಸಿದ್ದನಿದ್ದೇನೆ” ಎಂಬ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಧ್ಯಪ್ರದೇಶದ ರೈತರೊಂದಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, “ಈ ಕಾಯ್ದೆಗಳನ್ನು ತರಾತುರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿಲ್ಲ, ಬದಲಿಗೆ ದಶಕಗಳ ಕಾಲ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.

ಕೃಷಿ ಕಾಯ್ದೆಗಳಿಂದ ಏನೆಲ್ಲಾ ಉಪಯೋಗ ಎಂದು ಮತ್ತೊಮ್ಮೆ ವಿವರಿಸಿರುವ ಮೋದಿ, ‘ರೈತರ ಕಲ್ಯಾಣವೇ ನಮ್ಮ ಸರ್ಕಾರದ ಅತಿ ಮುಖ್ಯ ಆದ್ಯತೆ. ನೂತನ ಕೃಷಿ ಕಾಯ್ದೆಗಳ ಸುತ್ತಲಿನ ಸುಳ್ಳುಗಳನ್ನು ನಂಬಬೇಡಿ. ಇದೆಲ್ಲದರ ಆಚೆಗೆ ಕೈ ಮುಗಿದು, ತಲೆಬಾಗಿ ರೈತರು ಏನು ಹೇಳುತ್ತಾರೆ ಎಲ್ಲವನ್ನು ಕೇಳಲು ಸಿದ್ದನಿದ್ದೇನೆ. ಅವರ ಅಭ್ಯುದಯವೇ ನಮ್ಮ ಪ್ರಧಾನ ಕರ್ತವ್ಯ’ ಎಂದು ಹೇಳಿದ್ದಾರೆ.

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, “ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ” ಎಂದಿದ್ದಾರೆ.

“ಈ ಕಾಯ್ದೆಗಳನ್ನು ರಾತ್ರೋರಾತ್ರಿ ತಂದಿದ್ದಲ್ಲ. ಈ ಕುರಿತು ದಶಕಗಳ ಕಾಲ ಚರ್ಚಿಸಲಾಗಿದೆ. ಕಳೆದ 22 ವರ್ಷಗಳಿಂದ ಎಲ್ಲಾ ರಾಜ್ಯ ಸರ್ಕಾರಗಳು ಈ ಕುರಿತು ಚರ್ಚಿಸಿವೆ. ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಶಾಸ್ತ್ರಜ್ಞರು, ವಿಜ್ಞಾನಿಗಳು ಸೇರಿ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಗಳು ಬೇಕೆಂದು ರೈತರು ಆಗ್ರಹಿಸಿದ್ದಾರೆ. ಈ ಕಾಯ್ದೆಗಳನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದೇ ಅಂಶಗಳಿವೆ. ಆ ಪಕ್ಷಗಳಿಗೆ ಇಂದು ನೋವಾಗಿದೆ. ನಾವು ತರಲಾಗದ್ದನ್ನು ಮೋದಿ ಹೇಗೆ ತರುತ್ತಾರೆ ಎಂದು ಅವರು ಕೇಳಿಕೊಳ್ಳುತ್ತಿದ್ದಾರೆ. ಮೋದಿ ಏಕೆ ಇದರ ಲಾಭ ಪಡೆಯಬೇಕೆಂಬುದು ಅವರ ಹುನ್ನಾರ. ನಾನು ಇದರ ಲಾಭ ಪಡೆಯುವುದಿಲ್ಲ. ಲಾಭವನ್ನು ನಿಮಗೆ ಮತ್ತು ನಿಮ್ಮ ಪ್ರಣಾಳಿಕೆಗಳಿಗೆ ನೀಡುತ್ತೇನೆ. ನನಗೆ ರೈತರ ಅಭ್ಯುದಯ ಮುಖ್ಯ. ಸುಳ್ಳು ಹರಡುವುದನ್ನು ನಿಲ್ಲಿಸಿ” ಎಂದು ಮೋದಿ ಹೇಳಿದ್ದಾರೆ.

ಪ್ರಪಂಚದ ರೈತರು ಅತ್ಯಾಧುನಿಕ ತಂತ್ರಜ್ಞಾನದಿಂದ ಮುಂದುವರೆಯುತ್ತಿರುವಾಗ ನಮ್ಮ ದೇಶದ ರೈತರನ್ನು ಹಿಂದುಳಿಯಲು ನಾವು ಬಿಡುವುದಿಲ್ಲ. ಈ ಕುರಿತು ಪ್ರತಿಪಕ್ಷಗಳು ಹೇಳುವ ಸುಳ್ಳುಗಳನ್ನು ನಂಬಬೇಡಿ. ಅವರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲಿಲ್ಲ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಶಿಫಾರುಸ್ಸುಗಳನ್ನು ಜಾರಿ ಮಾಡಿದೆ. ಮಧ್ಯಪ್ರದೇಶದ ಜನರಿಗೆ ಅವರ ಬಗ್ಗೆ ಚೆನ್ನಾಗಿ ತಿಳಿಸಿದೆ. ಅವರು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅದರ ಪ್ರಯೋಜನ ನಿಮಗೆ ಸಿಕ್ಕಿದೆಯೇ ಎಂದು ಮೋದಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ‘ಕೃಷಿ ಸುಧಾರಣೆಯಲ್ಲಿ ಜಾತಿ ವಿನಾಶದ ಬೀಜಗಳಿವೆ’ – ಕೃಷಿ ಕುರಿತ ಅಂಬೇಡ್ಕರ್ ಚಿಂತನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಪಟ ಭಾವನಾತ್ಮಕತೆಯೇ ಇವರ ರಾಜಕೀಯ ಬಂಡವಾಳ. ಬಡ ರೈತರ ನೋವಿಗೆ ಸ್ಪಂದಿಸುವ ನಿಷ್ಕಲ್ಮಷ ಉದ್ದೇಶ ಇವರಿಗಿದ್ದಿದ್ದರೆ ಇಷ್ಟು ದಿನ ರೈತರನ್ನು ಬೀದಿಯಲ್ಲಿ ನಿಲ್ಲಿಸಿ ಸತಾಯಿಸುವ, ಅವಮಾನಿಸುವ, ಅವರ ಘನತೆಗೆ ಮಾತ್ರವಲ್ಲ ಜೀವಕ್ಕೆ ಧಕ್ಕೆತರುವ ಅಗತ್ಯವಿತ್ತೇ?

  2. I don’t know how much pm as paid the amt to the media people all the positive news giving to public people .they not showing the problems wat people are facing right now roads street lights water hospitals …. simply they announce the sceams and they leave that and 10 to 15 people will get that offer wat pm give media people will show that 15 people who have received the offer for 3 o 5days if some who not received if is asked they will tell oppasion party or media won’t let that person to speak if front of the public they will change the topic then people wil forget it .I am looking for right media who fight for right .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...