Homeಮುಖಪುಟಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, "ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ" ಎಂದಿದ್ದಾರೆ.

- Advertisement -
- Advertisement -

ಕೇಂದ್ರದ 3 ವಿವಾದಾತ್ಮಕ ಕಾಯ್ದೆಗಳನ್ನು ಮತ್ತೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಕೈ ಮುಗಿದು, ತಲೆಬಾಗಿ ರೈತರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಸಿದ್ದನಿದ್ದೇನೆ” ಎಂಬ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಧ್ಯಪ್ರದೇಶದ ರೈತರೊಂದಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, “ಈ ಕಾಯ್ದೆಗಳನ್ನು ತರಾತುರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿಲ್ಲ, ಬದಲಿಗೆ ದಶಕಗಳ ಕಾಲ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.

ಕೃಷಿ ಕಾಯ್ದೆಗಳಿಂದ ಏನೆಲ್ಲಾ ಉಪಯೋಗ ಎಂದು ಮತ್ತೊಮ್ಮೆ ವಿವರಿಸಿರುವ ಮೋದಿ, ‘ರೈತರ ಕಲ್ಯಾಣವೇ ನಮ್ಮ ಸರ್ಕಾರದ ಅತಿ ಮುಖ್ಯ ಆದ್ಯತೆ. ನೂತನ ಕೃಷಿ ಕಾಯ್ದೆಗಳ ಸುತ್ತಲಿನ ಸುಳ್ಳುಗಳನ್ನು ನಂಬಬೇಡಿ. ಇದೆಲ್ಲದರ ಆಚೆಗೆ ಕೈ ಮುಗಿದು, ತಲೆಬಾಗಿ ರೈತರು ಏನು ಹೇಳುತ್ತಾರೆ ಎಲ್ಲವನ್ನು ಕೇಳಲು ಸಿದ್ದನಿದ್ದೇನೆ. ಅವರ ಅಭ್ಯುದಯವೇ ನಮ್ಮ ಪ್ರಧಾನ ಕರ್ತವ್ಯ’ ಎಂದು ಹೇಳಿದ್ದಾರೆ.

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, “ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ” ಎಂದಿದ್ದಾರೆ.

“ಈ ಕಾಯ್ದೆಗಳನ್ನು ರಾತ್ರೋರಾತ್ರಿ ತಂದಿದ್ದಲ್ಲ. ಈ ಕುರಿತು ದಶಕಗಳ ಕಾಲ ಚರ್ಚಿಸಲಾಗಿದೆ. ಕಳೆದ 22 ವರ್ಷಗಳಿಂದ ಎಲ್ಲಾ ರಾಜ್ಯ ಸರ್ಕಾರಗಳು ಈ ಕುರಿತು ಚರ್ಚಿಸಿವೆ. ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಶಾಸ್ತ್ರಜ್ಞರು, ವಿಜ್ಞಾನಿಗಳು ಸೇರಿ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಗಳು ಬೇಕೆಂದು ರೈತರು ಆಗ್ರಹಿಸಿದ್ದಾರೆ. ಈ ಕಾಯ್ದೆಗಳನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದೇ ಅಂಶಗಳಿವೆ. ಆ ಪಕ್ಷಗಳಿಗೆ ಇಂದು ನೋವಾಗಿದೆ. ನಾವು ತರಲಾಗದ್ದನ್ನು ಮೋದಿ ಹೇಗೆ ತರುತ್ತಾರೆ ಎಂದು ಅವರು ಕೇಳಿಕೊಳ್ಳುತ್ತಿದ್ದಾರೆ. ಮೋದಿ ಏಕೆ ಇದರ ಲಾಭ ಪಡೆಯಬೇಕೆಂಬುದು ಅವರ ಹುನ್ನಾರ. ನಾನು ಇದರ ಲಾಭ ಪಡೆಯುವುದಿಲ್ಲ. ಲಾಭವನ್ನು ನಿಮಗೆ ಮತ್ತು ನಿಮ್ಮ ಪ್ರಣಾಳಿಕೆಗಳಿಗೆ ನೀಡುತ್ತೇನೆ. ನನಗೆ ರೈತರ ಅಭ್ಯುದಯ ಮುಖ್ಯ. ಸುಳ್ಳು ಹರಡುವುದನ್ನು ನಿಲ್ಲಿಸಿ” ಎಂದು ಮೋದಿ ಹೇಳಿದ್ದಾರೆ.

ಪ್ರಪಂಚದ ರೈತರು ಅತ್ಯಾಧುನಿಕ ತಂತ್ರಜ್ಞಾನದಿಂದ ಮುಂದುವರೆಯುತ್ತಿರುವಾಗ ನಮ್ಮ ದೇಶದ ರೈತರನ್ನು ಹಿಂದುಳಿಯಲು ನಾವು ಬಿಡುವುದಿಲ್ಲ. ಈ ಕುರಿತು ಪ್ರತಿಪಕ್ಷಗಳು ಹೇಳುವ ಸುಳ್ಳುಗಳನ್ನು ನಂಬಬೇಡಿ. ಅವರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲಿಲ್ಲ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಶಿಫಾರುಸ್ಸುಗಳನ್ನು ಜಾರಿ ಮಾಡಿದೆ. ಮಧ್ಯಪ್ರದೇಶದ ಜನರಿಗೆ ಅವರ ಬಗ್ಗೆ ಚೆನ್ನಾಗಿ ತಿಳಿಸಿದೆ. ಅವರು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅದರ ಪ್ರಯೋಜನ ನಿಮಗೆ ಸಿಕ್ಕಿದೆಯೇ ಎಂದು ಮೋದಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ‘ಕೃಷಿ ಸುಧಾರಣೆಯಲ್ಲಿ ಜಾತಿ ವಿನಾಶದ ಬೀಜಗಳಿವೆ’ – ಕೃಷಿ ಕುರಿತ ಅಂಬೇಡ್ಕರ್ ಚಿಂತನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಪಟ ಭಾವನಾತ್ಮಕತೆಯೇ ಇವರ ರಾಜಕೀಯ ಬಂಡವಾಳ. ಬಡ ರೈತರ ನೋವಿಗೆ ಸ್ಪಂದಿಸುವ ನಿಷ್ಕಲ್ಮಷ ಉದ್ದೇಶ ಇವರಿಗಿದ್ದಿದ್ದರೆ ಇಷ್ಟು ದಿನ ರೈತರನ್ನು ಬೀದಿಯಲ್ಲಿ ನಿಲ್ಲಿಸಿ ಸತಾಯಿಸುವ, ಅವಮಾನಿಸುವ, ಅವರ ಘನತೆಗೆ ಮಾತ್ರವಲ್ಲ ಜೀವಕ್ಕೆ ಧಕ್ಕೆತರುವ ಅಗತ್ಯವಿತ್ತೇ?

  2. I don’t know how much pm as paid the amt to the media people all the positive news giving to public people .they not showing the problems wat people are facing right now roads street lights water hospitals …. simply they announce the sceams and they leave that and 10 to 15 people will get that offer wat pm give media people will show that 15 people who have received the offer for 3 o 5days if some who not received if is asked they will tell oppasion party or media won’t let that person to speak if front of the public they will change the topic then people wil forget it .I am looking for right media who fight for right .

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...