Homeಮುಖಪುಟಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, "ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ" ಎಂದಿದ್ದಾರೆ.

- Advertisement -
- Advertisement -

ಕೇಂದ್ರದ 3 ವಿವಾದಾತ್ಮಕ ಕಾಯ್ದೆಗಳನ್ನು ಮತ್ತೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಕೈ ಮುಗಿದು, ತಲೆಬಾಗಿ ರೈತರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಸಿದ್ದನಿದ್ದೇನೆ” ಎಂಬ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಧ್ಯಪ್ರದೇಶದ ರೈತರೊಂದಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, “ಈ ಕಾಯ್ದೆಗಳನ್ನು ತರಾತುರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿಲ್ಲ, ಬದಲಿಗೆ ದಶಕಗಳ ಕಾಲ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.

ಕೃಷಿ ಕಾಯ್ದೆಗಳಿಂದ ಏನೆಲ್ಲಾ ಉಪಯೋಗ ಎಂದು ಮತ್ತೊಮ್ಮೆ ವಿವರಿಸಿರುವ ಮೋದಿ, ‘ರೈತರ ಕಲ್ಯಾಣವೇ ನಮ್ಮ ಸರ್ಕಾರದ ಅತಿ ಮುಖ್ಯ ಆದ್ಯತೆ. ನೂತನ ಕೃಷಿ ಕಾಯ್ದೆಗಳ ಸುತ್ತಲಿನ ಸುಳ್ಳುಗಳನ್ನು ನಂಬಬೇಡಿ. ಇದೆಲ್ಲದರ ಆಚೆಗೆ ಕೈ ಮುಗಿದು, ತಲೆಬಾಗಿ ರೈತರು ಏನು ಹೇಳುತ್ತಾರೆ ಎಲ್ಲವನ್ನು ಕೇಳಲು ಸಿದ್ದನಿದ್ದೇನೆ. ಅವರ ಅಭ್ಯುದಯವೇ ನಮ್ಮ ಪ್ರಧಾನ ಕರ್ತವ್ಯ’ ಎಂದು ಹೇಳಿದ್ದಾರೆ.

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, “ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ” ಎಂದಿದ್ದಾರೆ.

“ಈ ಕಾಯ್ದೆಗಳನ್ನು ರಾತ್ರೋರಾತ್ರಿ ತಂದಿದ್ದಲ್ಲ. ಈ ಕುರಿತು ದಶಕಗಳ ಕಾಲ ಚರ್ಚಿಸಲಾಗಿದೆ. ಕಳೆದ 22 ವರ್ಷಗಳಿಂದ ಎಲ್ಲಾ ರಾಜ್ಯ ಸರ್ಕಾರಗಳು ಈ ಕುರಿತು ಚರ್ಚಿಸಿವೆ. ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಶಾಸ್ತ್ರಜ್ಞರು, ವಿಜ್ಞಾನಿಗಳು ಸೇರಿ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಗಳು ಬೇಕೆಂದು ರೈತರು ಆಗ್ರಹಿಸಿದ್ದಾರೆ. ಈ ಕಾಯ್ದೆಗಳನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದೇ ಅಂಶಗಳಿವೆ. ಆ ಪಕ್ಷಗಳಿಗೆ ಇಂದು ನೋವಾಗಿದೆ. ನಾವು ತರಲಾಗದ್ದನ್ನು ಮೋದಿ ಹೇಗೆ ತರುತ್ತಾರೆ ಎಂದು ಅವರು ಕೇಳಿಕೊಳ್ಳುತ್ತಿದ್ದಾರೆ. ಮೋದಿ ಏಕೆ ಇದರ ಲಾಭ ಪಡೆಯಬೇಕೆಂಬುದು ಅವರ ಹುನ್ನಾರ. ನಾನು ಇದರ ಲಾಭ ಪಡೆಯುವುದಿಲ್ಲ. ಲಾಭವನ್ನು ನಿಮಗೆ ಮತ್ತು ನಿಮ್ಮ ಪ್ರಣಾಳಿಕೆಗಳಿಗೆ ನೀಡುತ್ತೇನೆ. ನನಗೆ ರೈತರ ಅಭ್ಯುದಯ ಮುಖ್ಯ. ಸುಳ್ಳು ಹರಡುವುದನ್ನು ನಿಲ್ಲಿಸಿ” ಎಂದು ಮೋದಿ ಹೇಳಿದ್ದಾರೆ.

ಪ್ರಪಂಚದ ರೈತರು ಅತ್ಯಾಧುನಿಕ ತಂತ್ರಜ್ಞಾನದಿಂದ ಮುಂದುವರೆಯುತ್ತಿರುವಾಗ ನಮ್ಮ ದೇಶದ ರೈತರನ್ನು ಹಿಂದುಳಿಯಲು ನಾವು ಬಿಡುವುದಿಲ್ಲ. ಈ ಕುರಿತು ಪ್ರತಿಪಕ್ಷಗಳು ಹೇಳುವ ಸುಳ್ಳುಗಳನ್ನು ನಂಬಬೇಡಿ. ಅವರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲಿಲ್ಲ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಶಿಫಾರುಸ್ಸುಗಳನ್ನು ಜಾರಿ ಮಾಡಿದೆ. ಮಧ್ಯಪ್ರದೇಶದ ಜನರಿಗೆ ಅವರ ಬಗ್ಗೆ ಚೆನ್ನಾಗಿ ತಿಳಿಸಿದೆ. ಅವರು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅದರ ಪ್ರಯೋಜನ ನಿಮಗೆ ಸಿಕ್ಕಿದೆಯೇ ಎಂದು ಮೋದಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ‘ಕೃಷಿ ಸುಧಾರಣೆಯಲ್ಲಿ ಜಾತಿ ವಿನಾಶದ ಬೀಜಗಳಿವೆ’ – ಕೃಷಿ ಕುರಿತ ಅಂಬೇಡ್ಕರ್ ಚಿಂತನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಪಟ ಭಾವನಾತ್ಮಕತೆಯೇ ಇವರ ರಾಜಕೀಯ ಬಂಡವಾಳ. ಬಡ ರೈತರ ನೋವಿಗೆ ಸ್ಪಂದಿಸುವ ನಿಷ್ಕಲ್ಮಷ ಉದ್ದೇಶ ಇವರಿಗಿದ್ದಿದ್ದರೆ ಇಷ್ಟು ದಿನ ರೈತರನ್ನು ಬೀದಿಯಲ್ಲಿ ನಿಲ್ಲಿಸಿ ಸತಾಯಿಸುವ, ಅವಮಾನಿಸುವ, ಅವರ ಘನತೆಗೆ ಮಾತ್ರವಲ್ಲ ಜೀವಕ್ಕೆ ಧಕ್ಕೆತರುವ ಅಗತ್ಯವಿತ್ತೇ?

  2. I don’t know how much pm as paid the amt to the media people all the positive news giving to public people .they not showing the problems wat people are facing right now roads street lights water hospitals …. simply they announce the sceams and they leave that and 10 to 15 people will get that offer wat pm give media people will show that 15 people who have received the offer for 3 o 5days if some who not received if is asked they will tell oppasion party or media won’t let that person to speak if front of the public they will change the topic then people wil forget it .I am looking for right media who fight for right .

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...