Homeಮುಖಪುಟಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, "ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ" ಎಂದಿದ್ದಾರೆ.

- Advertisement -
- Advertisement -

ಕೇಂದ್ರದ 3 ವಿವಾದಾತ್ಮಕ ಕಾಯ್ದೆಗಳನ್ನು ಮತ್ತೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಕೈ ಮುಗಿದು, ತಲೆಬಾಗಿ ರೈತರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಸಿದ್ದನಿದ್ದೇನೆ” ಎಂಬ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಧ್ಯಪ್ರದೇಶದ ರೈತರೊಂದಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, “ಈ ಕಾಯ್ದೆಗಳನ್ನು ತರಾತುರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿಲ್ಲ, ಬದಲಿಗೆ ದಶಕಗಳ ಕಾಲ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.

ಕೃಷಿ ಕಾಯ್ದೆಗಳಿಂದ ಏನೆಲ್ಲಾ ಉಪಯೋಗ ಎಂದು ಮತ್ತೊಮ್ಮೆ ವಿವರಿಸಿರುವ ಮೋದಿ, ‘ರೈತರ ಕಲ್ಯಾಣವೇ ನಮ್ಮ ಸರ್ಕಾರದ ಅತಿ ಮುಖ್ಯ ಆದ್ಯತೆ. ನೂತನ ಕೃಷಿ ಕಾಯ್ದೆಗಳ ಸುತ್ತಲಿನ ಸುಳ್ಳುಗಳನ್ನು ನಂಬಬೇಡಿ. ಇದೆಲ್ಲದರ ಆಚೆಗೆ ಕೈ ಮುಗಿದು, ತಲೆಬಾಗಿ ರೈತರು ಏನು ಹೇಳುತ್ತಾರೆ ಎಲ್ಲವನ್ನು ಕೇಳಲು ಸಿದ್ದನಿದ್ದೇನೆ. ಅವರ ಅಭ್ಯುದಯವೇ ನಮ್ಮ ಪ್ರಧಾನ ಕರ್ತವ್ಯ’ ಎಂದು ಹೇಳಿದ್ದಾರೆ.

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, “ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ” ಎಂದಿದ್ದಾರೆ.

“ಈ ಕಾಯ್ದೆಗಳನ್ನು ರಾತ್ರೋರಾತ್ರಿ ತಂದಿದ್ದಲ್ಲ. ಈ ಕುರಿತು ದಶಕಗಳ ಕಾಲ ಚರ್ಚಿಸಲಾಗಿದೆ. ಕಳೆದ 22 ವರ್ಷಗಳಿಂದ ಎಲ್ಲಾ ರಾಜ್ಯ ಸರ್ಕಾರಗಳು ಈ ಕುರಿತು ಚರ್ಚಿಸಿವೆ. ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಶಾಸ್ತ್ರಜ್ಞರು, ವಿಜ್ಞಾನಿಗಳು ಸೇರಿ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಗಳು ಬೇಕೆಂದು ರೈತರು ಆಗ್ರಹಿಸಿದ್ದಾರೆ. ಈ ಕಾಯ್ದೆಗಳನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದೇ ಅಂಶಗಳಿವೆ. ಆ ಪಕ್ಷಗಳಿಗೆ ಇಂದು ನೋವಾಗಿದೆ. ನಾವು ತರಲಾಗದ್ದನ್ನು ಮೋದಿ ಹೇಗೆ ತರುತ್ತಾರೆ ಎಂದು ಅವರು ಕೇಳಿಕೊಳ್ಳುತ್ತಿದ್ದಾರೆ. ಮೋದಿ ಏಕೆ ಇದರ ಲಾಭ ಪಡೆಯಬೇಕೆಂಬುದು ಅವರ ಹುನ್ನಾರ. ನಾನು ಇದರ ಲಾಭ ಪಡೆಯುವುದಿಲ್ಲ. ಲಾಭವನ್ನು ನಿಮಗೆ ಮತ್ತು ನಿಮ್ಮ ಪ್ರಣಾಳಿಕೆಗಳಿಗೆ ನೀಡುತ್ತೇನೆ. ನನಗೆ ರೈತರ ಅಭ್ಯುದಯ ಮುಖ್ಯ. ಸುಳ್ಳು ಹರಡುವುದನ್ನು ನಿಲ್ಲಿಸಿ” ಎಂದು ಮೋದಿ ಹೇಳಿದ್ದಾರೆ.

ಪ್ರಪಂಚದ ರೈತರು ಅತ್ಯಾಧುನಿಕ ತಂತ್ರಜ್ಞಾನದಿಂದ ಮುಂದುವರೆಯುತ್ತಿರುವಾಗ ನಮ್ಮ ದೇಶದ ರೈತರನ್ನು ಹಿಂದುಳಿಯಲು ನಾವು ಬಿಡುವುದಿಲ್ಲ. ಈ ಕುರಿತು ಪ್ರತಿಪಕ್ಷಗಳು ಹೇಳುವ ಸುಳ್ಳುಗಳನ್ನು ನಂಬಬೇಡಿ. ಅವರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲಿಲ್ಲ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಶಿಫಾರುಸ್ಸುಗಳನ್ನು ಜಾರಿ ಮಾಡಿದೆ. ಮಧ್ಯಪ್ರದೇಶದ ಜನರಿಗೆ ಅವರ ಬಗ್ಗೆ ಚೆನ್ನಾಗಿ ತಿಳಿಸಿದೆ. ಅವರು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅದರ ಪ್ರಯೋಜನ ನಿಮಗೆ ಸಿಕ್ಕಿದೆಯೇ ಎಂದು ಮೋದಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ‘ಕೃಷಿ ಸುಧಾರಣೆಯಲ್ಲಿ ಜಾತಿ ವಿನಾಶದ ಬೀಜಗಳಿವೆ’ – ಕೃಷಿ ಕುರಿತ ಅಂಬೇಡ್ಕರ್ ಚಿಂತನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಪಟ ಭಾವನಾತ್ಮಕತೆಯೇ ಇವರ ರಾಜಕೀಯ ಬಂಡವಾಳ. ಬಡ ರೈತರ ನೋವಿಗೆ ಸ್ಪಂದಿಸುವ ನಿಷ್ಕಲ್ಮಷ ಉದ್ದೇಶ ಇವರಿಗಿದ್ದಿದ್ದರೆ ಇಷ್ಟು ದಿನ ರೈತರನ್ನು ಬೀದಿಯಲ್ಲಿ ನಿಲ್ಲಿಸಿ ಸತಾಯಿಸುವ, ಅವಮಾನಿಸುವ, ಅವರ ಘನತೆಗೆ ಮಾತ್ರವಲ್ಲ ಜೀವಕ್ಕೆ ಧಕ್ಕೆತರುವ ಅಗತ್ಯವಿತ್ತೇ?

  2. I don’t know how much pm as paid the amt to the media people all the positive news giving to public people .they not showing the problems wat people are facing right now roads street lights water hospitals …. simply they announce the sceams and they leave that and 10 to 15 people will get that offer wat pm give media people will show that 15 people who have received the offer for 3 o 5days if some who not received if is asked they will tell oppasion party or media won’t let that person to speak if front of the public they will change the topic then people wil forget it .I am looking for right media who fight for right .

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...