Homeಅಂತರಾಷ್ಟ್ರೀಯಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

"ಅವರು ಸುಳ್ಳಿನಲ್ಲಿ, ಮೋಸದಲ್ಲಿ ತೊಡಗಲಿದ್ದಾರೆ. ಅವರು ಅಮೆರಿಕಾದ ಜನರ ಮೇಲೆ ಪರಿಣಾಮ ಬೀರುವ ನೈಜ ಸಮಸ್ಯೆಗಳಿಂದ ದೂರವಿರಲು ಪ್ರಯತ್ನಿಸುತ್ತಿದ್ದಾರೆ" ಎಂದು ಕ್ಯಾಲಿಫೋರ್ನಿಯಾ ಮೂಲದ ಸೆನೆಟರ್ ಹ್ಯಾರಿಸ್ 'ದಿ ಗ್ರಿಯೊ'ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ರಾಜಕೀಯ ವಿರೋಧಿಗಳ ಸುಳ್ಳು ಮತ್ತು ಗೊಂದಲಗಳನ್ನು ನಿರೀಕ್ಷಿಸಿದ್ದೇನೆ. ತಾನು ಉಪಾಧ್ಯಕ್ಷ ಹುದ್ದೆಗೆ ಅರ್ಹಳಲ್ಲ ಎಂಬ ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ ಎಂದು ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ತಿಳಿಸಿದ್ದಾರೆ.

“ಅವರು ಸುಳ್ಳಿನಲ್ಲಿ, ಮೋಸದಲ್ಲಿ ತೊಡಗಲಿದ್ದಾರೆ. ಅವರು ಅಮೆರಿಕಾದ ಜನರ ಮೇಲೆ ಪರಿಣಾಮ ಬೀರುವ ನೈಜ ಸಮಸ್ಯೆಗಳಿಂದ ದೂರವಿರಲು ಪ್ರಯತ್ನಿಸುತ್ತಿದ್ದಾರೆ” ಅವರು ಕೆಟ್ಟ ರಾಜಕೀಯ ಮಾಡಲು ಮುಂದಾಗುತ್ತಾರೆ ಎಂದು ಕ್ಯಾಲಿಫೋರ್ನಿಯಾ ಮೂಲದ ಸೆನೆಟರ್ ಹ್ಯಾರಿಸ್ ‘ದಿ ಗ್ರಿಯೊ’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಮುಂಬರುವ ಅಮೆರಿಕ ಚುನಾವಣೆಯ ಉಪಾಧ್ಯಕ್ಷ ಸ್ಥಾನಕ್ಕೆ ಮೊದಲ ಕಪ್ಪು ಮತ್ತು ದಕ್ಷಿಣ ಏಷ್ಯಾದ ಮಹಿಳಾ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಅವರನ್ನು ಘೋಷಣೆ ಮಾಡಿದ್ದಾರೆ. ತದನಂತರ ಹ್ಯಾರಿಸ್ ವಿರುದ್ಧ ಜನಾಂಗೀಯ ದಾಳಿಗಳು ಆರಂಭವಾಗಿವೆ. ಅವರು ವಲಸಿಗರಾಗಿದ್ದು, ಅವರ ಪೌರತ್ವದ ಬಗ್ಗೆ ಹಲವರು ಪ್ರಶ್ನೆಯೆತ್ತಿದ್ದಾರೆ.

ತಮ್ಮ ಪಕ್ಷದ ಹಿಂದಿನ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ಇದೇ ರೀತಿಯ ಪಿತೂರಿ ಸಿದ್ಧಾಂತವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ್ದರು. ಈಗಲೂ ನನ್ನ ಹೆತ್ತವರು ವಲಸಿಗರು ಎಂದು ದೂರುತ್ತಿದ್ದಾರೆ. ಈ ಎಲ್ಲಾ ಅಡೆತಡೆಗಳನ್ನು ಮೆಟ್ಟಿ ನಿಲ್ಲುತ್ತೇನೆ ಎಂದು ಕಮಲಾ ಹ್ಯಾರಿಸ್ ಹೇಳಿದ್ದಾರೆ.

ಹ್ಯಾರಿಸ್ ಅವರ ಅರ್ಹತೆಯನ್ನು ನಾನು ಪರಿಶೀಲಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದರೂ, ಟ್ರಂಪ್‌ರ  ಹಿರಿಯ ಕಾನೂನು ಸಲಹೆಗಾರ ಜೆನ್ನಾ ಎಲ್ಲಿಸ್ ಟ್ರಂಪ್ ಅವರ ಮಾತನ್ನು ರಿಟ್ವೀಟ್ ಮಾಡಿ ಅದನ್ನು ಸ್ಪಷ್ಟಪಡಿಸುವಂತೆ ಕಮಲಾ ಹ್ಯಾರಿಸ್ ಅವರನ್ನು ಕೇಳಿದ್ಧಾರೆ.

“ಇದು ಮುಕ್ತ ಪ್ರಶ್ನೆ, ಹ್ಯಾರಿಸ್ ಇದಕ್ಕೆ ಉತ್ತರಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಎಬಿಸಿ ನ್ಯೂಸ್‌ಗೆ ತಿಳಿಸಿದರು.

ಟ್ರಂಪ್ ಹಿರಿಯ ಸಲಹೆಗಾರರಾದ ಸ್ಟೀವ್ ಕೊರ್ಟೆಸ್ ಹ್ಯಾರಿಸ್ ವಿರುದ್ಧದ ಸುಳ್ಳು ಹೇಳಿಕೆ ನೀಡಿದ್ದರು. ಈ ಕುರಿತು ಟ್ರಂಪ್ ಖಂಡಿಸದಿರುವ ಬಗ್ಗೆ ಪತ್ರಕರ್ತರು ಕೇಳಿದಾಗ, ಅದು ಅಧ್ಯಕ್ಷರ ಜವಾಬ್ದಾರಿಯಲ್ಲ ಎಂದು ಟ್ರಂಪ್ ಹೇಳಿದ್ದರು.


ಓದಿ: ಕಮಲಾ ಹ್ಯಾರಿಸ್ ಗಿಂತ ಹೆಚ್ಚು ಭಾರತೀಯರ ಬೆಂಬಲ ನನಗಿದೆ: ಟ್ರಂಪ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...