Homeಮುಖಪುಟಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಪೊಲೀಸ್ ಮೊಕದ್ದಮೆ ದಾಖಲಿಸಬೇಕು ಎಂದು ವಿಚಾರಣಾ ನ್ಯಾಯಾಲಯವು ಹೇಳಿದ ಬೆನ್ನಲ್ಲೇ, “ನಾನು ಹೋರಾಟ ಮಾಡುತ್ತೇನೆ, ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪ್ರತಿಕ್ರಿಯಿಸಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ.
ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆದರೆ, ಮುಖ್ಯಮಂತ್ರಿ ವಿರುದ್ಧದ ಪ್ರಕರಣ ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಅಸಮಾಧಾಣ ವ್ಯಕ್ತಪಡಿಸಿದ್ದಾರೆ. “ತೀರ್ಪಿನಿಂದ ಸಂಪೂರ್ಣವಾಗಿ ತೃಪ್ತರಾಗಿಲ್ಲ, ತನಿಖೆಯನ್ನು ಸಿಬಿಐನಿಂದ ಮಾತ್ರ ಮಾಡಬೇಕು” ಎಂದು ಅವರು ಹೇಳಿದ್ದಾರೆ. “ಲೋಕಾಯುಕ್ತದಿಂದ ತನಿಖೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ಎಫ್‌ಐಆರ್ ದಾಖಲಾದ ನಂತರ ನಾವು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸುತ್ತೇವೆ” ಎಂದು ಅವರು ಘೋಷಿಸಿದರು.

ಮುಖ್ಯಮಂತ್ರಿಗಳು ಈಗ ತಮ್ಮ ಪತ್ನಿ ಪಾರ್ವತಿ ಅವರಿಗೆ ಮೈಸೂರು ಪ್ರದೇಶದಲ್ಲಿನ ಬಹುಪಾಲು ಭೂಮಿಯನ್ನು ಬೇರೆಡೆ ಭೂಮಿಗೆ ಪರಿಹಾರವಾಗಿ ಮಂಜೂರು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆಯನ್ನು ಎದುರಿಸಬೇಕಾಗುತ್ತದೆ. ಈ ವಿನಿಮಯದಿಂದ ರಾಜ್ಯಕ್ಕೆ ಕನಿಷ್ಠ ₹4,000 ಕೋಟಿ ನಷ್ಟವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.

ತಮ್ಮ ಮೇಳಿನ ಆರೋಪವನ್ನು ಬಲವಾಗಿ ನಿರಾಕರಿಸಿದ ಸಿದ್ದರಾಮಯ್ಯ, ಕಳೆದ ತಿಂಗಳು ಅವರು ನಾಲ್ಕು ದಶಕಗಳ ಕಾಲದ ರಾಜಕೀಯ ಜೀವನದಲ್ಲಿ ಯಾವುದೇ ಅಕ್ರಮ ಮಾಡಿಲ್ಲ. ನ್ಯಾಯಾಂಗವು ತಮ್ಮನ್ನು ಆರೋಪದಿಂದ ಮುಕ್ತಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಅವರಿಗೆ ಇದು ಎರಡನೇ ಹಿನ್ನಡೆಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಅವರ ಸವಾಲನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ತನ್ನ ಆದೇಶವನ್ನು ಅಂಗೀಕರಿಸುವಲ್ಲಿ, ಹೈಕೋರ್ಟ್ ತನ್ನ ಆಗಸ್ಟ್ 19 ರ ಆದೇಶವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿತು. ಗೆಹ್ಲೋಟ್ ಅವರ ಕ್ರಮವನ್ನು “ಅಕ್ರಮ” ಎಂದು ಪ್ರತಿಪಾದಿಸುವ ಅವರ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೆ ಮುಖ್ಯಮಂತ್ರಿಯ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಿತ್ತು.

ಆದೇಶದ ನಂತರ ಸಿದ್ದರಾಮಯ್ಯ ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ವಿಶ್ವಾಸವನ್ನು ಒತ್ತಿಹೇಳಿದರು. ಭಾರತೀಯ ಜನತಾ ಪಕ್ಷದ ಸೇಡಿನ ರಾಜಕೀಯವನ್ನು ಕಟುವಾಗಿ ಟೀಕಿಸಿದರು. “ನಾನು ಕಾನೂನಿನಲ್ಲಿ ನಂಬಿಕೆ ಇಡುತ್ತೇನೆ; ಸತ್ಯವು ಅಂತಿಮವಾಗಿ ಗೆಲ್ಲುತ್ತದೆ” ಎಂದು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...