Homeಮುಖಪುಟಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಪೊಲೀಸ್ ಮೊಕದ್ದಮೆ ದಾಖಲಿಸಬೇಕು ಎಂದು ವಿಚಾರಣಾ ನ್ಯಾಯಾಲಯವು ಹೇಳಿದ ಬೆನ್ನಲ್ಲೇ, “ನಾನು ಹೋರಾಟ ಮಾಡುತ್ತೇನೆ, ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪ್ರತಿಕ್ರಿಯಿಸಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ.
ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆದರೆ, ಮುಖ್ಯಮಂತ್ರಿ ವಿರುದ್ಧದ ಪ್ರಕರಣ ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಅಸಮಾಧಾಣ ವ್ಯಕ್ತಪಡಿಸಿದ್ದಾರೆ. “ತೀರ್ಪಿನಿಂದ ಸಂಪೂರ್ಣವಾಗಿ ತೃಪ್ತರಾಗಿಲ್ಲ, ತನಿಖೆಯನ್ನು ಸಿಬಿಐನಿಂದ ಮಾತ್ರ ಮಾಡಬೇಕು” ಎಂದು ಅವರು ಹೇಳಿದ್ದಾರೆ. “ಲೋಕಾಯುಕ್ತದಿಂದ ತನಿಖೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ಎಫ್‌ಐಆರ್ ದಾಖಲಾದ ನಂತರ ನಾವು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸುತ್ತೇವೆ” ಎಂದು ಅವರು ಘೋಷಿಸಿದರು.

ಮುಖ್ಯಮಂತ್ರಿಗಳು ಈಗ ತಮ್ಮ ಪತ್ನಿ ಪಾರ್ವತಿ ಅವರಿಗೆ ಮೈಸೂರು ಪ್ರದೇಶದಲ್ಲಿನ ಬಹುಪಾಲು ಭೂಮಿಯನ್ನು ಬೇರೆಡೆ ಭೂಮಿಗೆ ಪರಿಹಾರವಾಗಿ ಮಂಜೂರು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆಯನ್ನು ಎದುರಿಸಬೇಕಾಗುತ್ತದೆ. ಈ ವಿನಿಮಯದಿಂದ ರಾಜ್ಯಕ್ಕೆ ಕನಿಷ್ಠ ₹4,000 ಕೋಟಿ ನಷ್ಟವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.

ತಮ್ಮ ಮೇಳಿನ ಆರೋಪವನ್ನು ಬಲವಾಗಿ ನಿರಾಕರಿಸಿದ ಸಿದ್ದರಾಮಯ್ಯ, ಕಳೆದ ತಿಂಗಳು ಅವರು ನಾಲ್ಕು ದಶಕಗಳ ಕಾಲದ ರಾಜಕೀಯ ಜೀವನದಲ್ಲಿ ಯಾವುದೇ ಅಕ್ರಮ ಮಾಡಿಲ್ಲ. ನ್ಯಾಯಾಂಗವು ತಮ್ಮನ್ನು ಆರೋಪದಿಂದ ಮುಕ್ತಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಅವರಿಗೆ ಇದು ಎರಡನೇ ಹಿನ್ನಡೆಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಅವರ ಸವಾಲನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ತನ್ನ ಆದೇಶವನ್ನು ಅಂಗೀಕರಿಸುವಲ್ಲಿ, ಹೈಕೋರ್ಟ್ ತನ್ನ ಆಗಸ್ಟ್ 19 ರ ಆದೇಶವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿತು. ಗೆಹ್ಲೋಟ್ ಅವರ ಕ್ರಮವನ್ನು “ಅಕ್ರಮ” ಎಂದು ಪ್ರತಿಪಾದಿಸುವ ಅವರ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೆ ಮುಖ್ಯಮಂತ್ರಿಯ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಿತ್ತು.

ಆದೇಶದ ನಂತರ ಸಿದ್ದರಾಮಯ್ಯ ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ವಿಶ್ವಾಸವನ್ನು ಒತ್ತಿಹೇಳಿದರು. ಭಾರತೀಯ ಜನತಾ ಪಕ್ಷದ ಸೇಡಿನ ರಾಜಕೀಯವನ್ನು ಕಟುವಾಗಿ ಟೀಕಿಸಿದರು. “ನಾನು ಕಾನೂನಿನಲ್ಲಿ ನಂಬಿಕೆ ಇಡುತ್ತೇನೆ; ಸತ್ಯವು ಅಂತಿಮವಾಗಿ ಗೆಲ್ಲುತ್ತದೆ” ಎಂದು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...