Homeಕರೋನಾ ತಲ್ಲಣಕೊರೊನಾ ಸಮಯದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ ಎಂದು ನನಗೆ ತೃಪ್ತಿ ಇದೆ: ಮೋದಿ

ಕೊರೊನಾ ಸಮಯದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ ಎಂದು ನನಗೆ ತೃಪ್ತಿ ಇದೆ: ಮೋದಿ

ಜನವರಿ 16 ರಿಂದ ಪ್ರಾರಂಭವಾಗಲಿರುವ ಕೊರೊನಾ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನ ಆರಂಭದ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ ನಂತರ ಅವರು ಮಾತನಾಡಿದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವು ಒಕ್ಕೂಟ ವ್ಯವಸ್ಥೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಜನವರಿ 16 ರಿಂದ ಪ್ರಾರಂಭವಾಗಲಿರುವ ಲಸಿಕೆ ಅಭಿಯಾನ ಆರಂಭದ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ ನಂತರ ಅವರು ಮಾತನಾಡಿದರು.

“ಕೊರೊನಾ ಬಿಕ್ಕಟ್ಟಿನಲ್ಲಿ ಒಗ್ಗೂಡಿ ಕೆಲಸ ಮಾಡುವ ಮೂಲಕ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ ಎಂದು ನನಗೆ ತೃಪ್ತಿ ಇದೆ. ತ್ವರಿತ ನಿರ್ಧಾರಗಳನ್ನು ಪೂರ್ಣ ಸಂವೇದನೆಯೊಂದಿಗೆ ತೆಗೆದುಕೊಳ್ಳಲಾಗಿದೆ. ಇದರ ಪರಿಣಾಮವಾಗಿ, ಕೊರೊನಾವು ವಿಶ್ವದಲ್ಲಿ ಬೇರೆಡೆ ಹರಡಿದ ಪ್ರಮಾಣದಷ್ಟು ಭಾರತದಲ್ಲಿ ಹರಡಲಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.

ಈಗಾಗಲೇ ಅನುಮೋದಿತವಾಗಿರುವ ಎರಡು ಭಾರತ ನಿರ್ಮಿತ ಲಸಿಕೆಗಳಲ್ಲದೆ, ಇನ್ನೂ ನಾಲ್ಕು ಲಸಿಕೆಗಳನ್ನು ದೇಶದಲ್ಲಿ ಹೊರತರಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

“ಮೊದಲಿಗೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಪೌರ ಕಾರ್ಮಿಕರು, ಇತರ ಮುಂಚೂಣಿಯ ಕಾರ್ಮಿಕರು, ರಕ್ಷಣಾ ಪಡೆಗಳು, ಪೊಲೀಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು” ಎಂದು ಪ್ರಧಾನಿ ಮೋದಿ ಹೇಳಿದರು.

ಕಾರ್ಮಿಕರ ಸಾವು
ಕೊರೊನಾ ಸಮಯದಲ್ಲಿ ಮೋದಿ ಸರ್ಕಾರದ ಆದೇಶದಂತೆ ಲಾಕ್‌ಡೌನ್ ಆದಾಗ ಕಷ್ಟಪಟ್ಟ ವಲಸೆ ಕಾರ್ಮಿಕರು

“ಮೊದಲ ಹಂತದ ವ್ಯಾಕ್ಸಿನೇಷನ್‌ನಲ್ಲಿ ಸುಮಾರು ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು. ಎರಡನೇ ಹಂತದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು” ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಭಾರತದ ಔಷಧ ನಿಯಂತ್ರಕದಿಂದ ನಿರ್ಬಂಧಿತ ತುರ್ತು ಬಳಕೆಗಾಗಿ ಎರಡು ಕೊರೊನಾ ವೈರಸ್ ಲಸಿಕೆಗಳನ್ನು ಅನುಮೋದಿಸಿದ ನಂತರ ಮೋದಿಯು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಮೊದಲ ಸಂವಾದ ಇದು. ದೇಶದಲ್ಲಿ ಸಾಂಕ್ರಾಮಿಕ ರೋಗ ಹರಡಿದ ನಂತರ ಪ್ರಧಾನಿಯು ಹಲವಾರು ಭಾರಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ.

ಭಾರತದ ಔಷಧ ನಿಯಂತ್ರಕವು ಸೀರಮ್ ಇನ್‌ಸ್ಟಿಟ್ಯೂಟ್ ತಯಾರಿಸುತ್ತಿರುವ ಆಕ್ಸ್‌ಫರ್ಡ್ ಲಸಿಕೆ ಕೊವಿಶೀಲ್ಡ್  ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ದೇಶದಲ್ಲಿ ನಿರ್ಬಂಧಿತ ತುರ್ತು ಬಳಕೆಗಾಗಿ ಅನುಮತಿ ನೀಡಿದೆ. ಕಳೆದ ವಾರ ಶನಿವಾರ, ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಕೊರೊನಾ ಸ್ಥಿತಿ ಮತ್ತು ಲಸಿಕೆ ಸಿದ್ಧತೆಯನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಶೀಲಿಸಿದ್ದರು.

ಇದನ್ನು ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ ಕಾರ್ಯಕ್ರಮ ಎಂದು ಪ್ರಧಾನಿ ಕರೆದಿದ್ದಾರೆ.

ಇದನ್ನೂ ಓದಿ: ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...