Homeಮುಖಪುಟನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

ನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 16 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಚಲಿಸಿ ಮೃತಪಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ “ನನ್ನ ಕಾರ್ಮಿಕ ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 16 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸರಕುಗಳ ರೈಲು ಚಲಿಸಿ ನನ್ನ ಕಾರ್ಮಿಕರು ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನಮ್ಮ ರಾಷ್ಟ್ರ ನಿರ್ಮಾಣಕಾರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಗೊಂಡವರು ಬೇಗನೆ ಚೇತರಿಕೆಯಾಗಲಿ ಎಂಬ ಪ್ರಾರ್ಥನೆ” ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿನಿಂದ ತೀವ್ರ ದುಃಖಿತರಾಗಿದ್ದರು ಮತ್ತು ಅವರ ಕುಟುಂಬಗಳಿಗೆ “ಸಾಧ್ಯವಿರುವ ಎಲ್ಲ ಬೆಂಬಲ” ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

“ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದಾದ ಪ್ರಾಣಹಾನಿಗೆ ತೀವ್ರ ದುಃಖಿತನಾಗಿದ್ದೇನೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾರ್ಚ್ 24 ರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸಿಗ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರು ಲಾಕ್ ಡೌನ್ ನಂತರ ತಮ್ಮ ಊರಿಗೆ ನಡೆಯುತ್ತಾ ಹೋಗುತ್ತಿರುವ ಮನಕಲುಕುವ ಘಟನೆ ದೇಶದಾದ್ಯಂತ ವರದಿಯಾಗುತ್ತಿದೆ. ಈ ಮಹಾ ನಡಿಗೆಯಲ್ಲಿ ಹಲವಾರು ಜನರು ಈ ವರೆಗೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಕೇಂದ್ರದ ಆಡಳಿತ ಬಿಜೆಪಿ ಪಕ್ಷಕ್ಕೆ ರಾಜಕೀಯ ಹಿನ್ನಡೆಯಾಗುತ್ತದೆ ಎಂಬ ಬಗ್ಗೆ ಪಕ್ಷದೊಳಗೆ ಮನವರಿಕೆ ಮಾಡಿದ ನಂತರ, ವಲಸಿಗರು ಮನೆಗೆ ಹಿಂತಿರುಗಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರವು ರೈಲ್ವೆಗೆ ಅನುಮತಿ ನೀಡಿತ್ತು. ಇದರ ಹೊರತಾಗಿಯೂ, ಹಲವಾರು ವಲಸಿಗರು ತಮ್ಮ ತವರು ರಾಜ್ಯಕ್ಕೆ ನಡೆಯುತ್ತಾ ಹೋಗುವುದನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ


ವಿಡಿಯೊ ನೋಡಿ: ಮರೆಯಲೇ ಭಾರದ ಸುದ್ದಿಗಳಿವು. ಸದ್ದು…ಈ ಸುದ್ದಿಗಳೇನಾಗಿದೆ (ನಾಲ್ಕನೇ ಸಂಚಿಕೆ)

ಸದ್ದು… ಈ ಸುದ್ದಿಗಳೇನಾದವು? – 4

ನಾವು ಕೆಲವು ಸುದ್ದಿಗಳನ್ನು ಮರೆತುಬಿಡಬೇಕೆಂದು ಬಯಸುವವರು, ಹೊಸ ಸುದ್ದಿಗಳ ರಾಶಿ ಹಾಕುತ್ತಾರೆ. ಆದರೆ, ಇಂದು ನಾವು ಕಾಣುತ್ತಿರುವ ಸಮಸ್ಯೆಗಳ ಕಾರಣ ಹಿಂದಿನ ಘಟನೆಗಳಲ್ಲಿ ಇರುತ್ತದೆ. ಹಿಂದೆ ನಡೆದ ʼಬೃಹತ್ʼ ಹಗರಣ, ಅದರ ನಂತರ ನಡೆದ ಇನ್ನೊಂದು ಭೀಕರ ಘಟನೆಯ ಕಾರಣದಿಂದ ಮರೆಯಾಗುತ್ತದೆ. ಹಾಗಾಗಿ ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದ್ದೇ ಇದೆ.ಅಂತಹ ವಿಶಿಷ್ಟ ಕಾರ್ಯಕ್ರಮದ ನಾಲ್ಕನೇ ಕಂತು ಇಲ್ಲಿದೆ ನೋಡಿ.

Posted by Naanu Gauri on Wednesday, May 6, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...