Homeಮುಖಪುಟನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

ನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 16 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಚಲಿಸಿ ಮೃತಪಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ “ನನ್ನ ಕಾರ್ಮಿಕ ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 16 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸರಕುಗಳ ರೈಲು ಚಲಿಸಿ ನನ್ನ ಕಾರ್ಮಿಕರು ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನಮ್ಮ ರಾಷ್ಟ್ರ ನಿರ್ಮಾಣಕಾರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಗೊಂಡವರು ಬೇಗನೆ ಚೇತರಿಕೆಯಾಗಲಿ ಎಂಬ ಪ್ರಾರ್ಥನೆ” ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿನಿಂದ ತೀವ್ರ ದುಃಖಿತರಾಗಿದ್ದರು ಮತ್ತು ಅವರ ಕುಟುಂಬಗಳಿಗೆ “ಸಾಧ್ಯವಿರುವ ಎಲ್ಲ ಬೆಂಬಲ” ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

“ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದಾದ ಪ್ರಾಣಹಾನಿಗೆ ತೀವ್ರ ದುಃಖಿತನಾಗಿದ್ದೇನೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾರ್ಚ್ 24 ರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸಿಗ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರು ಲಾಕ್ ಡೌನ್ ನಂತರ ತಮ್ಮ ಊರಿಗೆ ನಡೆಯುತ್ತಾ ಹೋಗುತ್ತಿರುವ ಮನಕಲುಕುವ ಘಟನೆ ದೇಶದಾದ್ಯಂತ ವರದಿಯಾಗುತ್ತಿದೆ. ಈ ಮಹಾ ನಡಿಗೆಯಲ್ಲಿ ಹಲವಾರು ಜನರು ಈ ವರೆಗೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಕೇಂದ್ರದ ಆಡಳಿತ ಬಿಜೆಪಿ ಪಕ್ಷಕ್ಕೆ ರಾಜಕೀಯ ಹಿನ್ನಡೆಯಾಗುತ್ತದೆ ಎಂಬ ಬಗ್ಗೆ ಪಕ್ಷದೊಳಗೆ ಮನವರಿಕೆ ಮಾಡಿದ ನಂತರ, ವಲಸಿಗರು ಮನೆಗೆ ಹಿಂತಿರುಗಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರವು ರೈಲ್ವೆಗೆ ಅನುಮತಿ ನೀಡಿತ್ತು. ಇದರ ಹೊರತಾಗಿಯೂ, ಹಲವಾರು ವಲಸಿಗರು ತಮ್ಮ ತವರು ರಾಜ್ಯಕ್ಕೆ ನಡೆಯುತ್ತಾ ಹೋಗುವುದನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ


ವಿಡಿಯೊ ನೋಡಿ: ಮರೆಯಲೇ ಭಾರದ ಸುದ್ದಿಗಳಿವು. ಸದ್ದು…ಈ ಸುದ್ದಿಗಳೇನಾಗಿದೆ (ನಾಲ್ಕನೇ ಸಂಚಿಕೆ)

ಸದ್ದು… ಈ ಸುದ್ದಿಗಳೇನಾದವು? – 4

ನಾವು ಕೆಲವು ಸುದ್ದಿಗಳನ್ನು ಮರೆತುಬಿಡಬೇಕೆಂದು ಬಯಸುವವರು, ಹೊಸ ಸುದ್ದಿಗಳ ರಾಶಿ ಹಾಕುತ್ತಾರೆ. ಆದರೆ, ಇಂದು ನಾವು ಕಾಣುತ್ತಿರುವ ಸಮಸ್ಯೆಗಳ ಕಾರಣ ಹಿಂದಿನ ಘಟನೆಗಳಲ್ಲಿ ಇರುತ್ತದೆ. ಹಿಂದೆ ನಡೆದ ʼಬೃಹತ್ʼ ಹಗರಣ, ಅದರ ನಂತರ ನಡೆದ ಇನ್ನೊಂದು ಭೀಕರ ಘಟನೆಯ ಕಾರಣದಿಂದ ಮರೆಯಾಗುತ್ತದೆ. ಹಾಗಾಗಿ ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದ್ದೇ ಇದೆ.ಅಂತಹ ವಿಶಿಷ್ಟ ಕಾರ್ಯಕ್ರಮದ ನಾಲ್ಕನೇ ಕಂತು ಇಲ್ಲಿದೆ ನೋಡಿ.

Posted by Naanu Gauri on Wednesday, May 6, 2020


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...