Homeಮುಖಪುಟನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

ನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 16 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಚಲಿಸಿ ಮೃತಪಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ “ನನ್ನ ಕಾರ್ಮಿಕ ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 16 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸರಕುಗಳ ರೈಲು ಚಲಿಸಿ ನನ್ನ ಕಾರ್ಮಿಕರು ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನಮ್ಮ ರಾಷ್ಟ್ರ ನಿರ್ಮಾಣಕಾರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಗೊಂಡವರು ಬೇಗನೆ ಚೇತರಿಕೆಯಾಗಲಿ ಎಂಬ ಪ್ರಾರ್ಥನೆ” ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿನಿಂದ ತೀವ್ರ ದುಃಖಿತರಾಗಿದ್ದರು ಮತ್ತು ಅವರ ಕುಟುಂಬಗಳಿಗೆ “ಸಾಧ್ಯವಿರುವ ಎಲ್ಲ ಬೆಂಬಲ” ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

“ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದಾದ ಪ್ರಾಣಹಾನಿಗೆ ತೀವ್ರ ದುಃಖಿತನಾಗಿದ್ದೇನೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾರ್ಚ್ 24 ರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸಿಗ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರು ಲಾಕ್ ಡೌನ್ ನಂತರ ತಮ್ಮ ಊರಿಗೆ ನಡೆಯುತ್ತಾ ಹೋಗುತ್ತಿರುವ ಮನಕಲುಕುವ ಘಟನೆ ದೇಶದಾದ್ಯಂತ ವರದಿಯಾಗುತ್ತಿದೆ. ಈ ಮಹಾ ನಡಿಗೆಯಲ್ಲಿ ಹಲವಾರು ಜನರು ಈ ವರೆಗೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಕೇಂದ್ರದ ಆಡಳಿತ ಬಿಜೆಪಿ ಪಕ್ಷಕ್ಕೆ ರಾಜಕೀಯ ಹಿನ್ನಡೆಯಾಗುತ್ತದೆ ಎಂಬ ಬಗ್ಗೆ ಪಕ್ಷದೊಳಗೆ ಮನವರಿಕೆ ಮಾಡಿದ ನಂತರ, ವಲಸಿಗರು ಮನೆಗೆ ಹಿಂತಿರುಗಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರವು ರೈಲ್ವೆಗೆ ಅನುಮತಿ ನೀಡಿತ್ತು. ಇದರ ಹೊರತಾಗಿಯೂ, ಹಲವಾರು ವಲಸಿಗರು ತಮ್ಮ ತವರು ರಾಜ್ಯಕ್ಕೆ ನಡೆಯುತ್ತಾ ಹೋಗುವುದನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ


ವಿಡಿಯೊ ನೋಡಿ: ಮರೆಯಲೇ ಭಾರದ ಸುದ್ದಿಗಳಿವು. ಸದ್ದು…ಈ ಸುದ್ದಿಗಳೇನಾಗಿದೆ (ನಾಲ್ಕನೇ ಸಂಚಿಕೆ)

ಸದ್ದು… ಈ ಸುದ್ದಿಗಳೇನಾದವು? – 4

ನಾವು ಕೆಲವು ಸುದ್ದಿಗಳನ್ನು ಮರೆತುಬಿಡಬೇಕೆಂದು ಬಯಸುವವರು, ಹೊಸ ಸುದ್ದಿಗಳ ರಾಶಿ ಹಾಕುತ್ತಾರೆ. ಆದರೆ, ಇಂದು ನಾವು ಕಾಣುತ್ತಿರುವ ಸಮಸ್ಯೆಗಳ ಕಾರಣ ಹಿಂದಿನ ಘಟನೆಗಳಲ್ಲಿ ಇರುತ್ತದೆ. ಹಿಂದೆ ನಡೆದ ʼಬೃಹತ್ʼ ಹಗರಣ, ಅದರ ನಂತರ ನಡೆದ ಇನ್ನೊಂದು ಭೀಕರ ಘಟನೆಯ ಕಾರಣದಿಂದ ಮರೆಯಾಗುತ್ತದೆ. ಹಾಗಾಗಿ ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದ್ದೇ ಇದೆ.ಅಂತಹ ವಿಶಿಷ್ಟ ಕಾರ್ಯಕ್ರಮದ ನಾಲ್ಕನೇ ಕಂತು ಇಲ್ಲಿದೆ ನೋಡಿ.

Posted by Naanu Gauri on Wednesday, May 6, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...