Homeಮುಖಪುಟನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್...

ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್ ಪ್ರತಿಕ್ರಿಯೆ

ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ? - ಉದಯನಿಧಿ ಸ್ಟಾಲಿನ್

- Advertisement -
- Advertisement -

ನಾನು ಎಂ.ಕೆ ಸ್ಟಾಲಿನ್. ತುರ್ತು ಪರಿಸ್ಥಿತಿಯನ್ನು ಎದುರಿಸಿದವನು. ನಿಮ್ಮ ಈ ಐಟಿ ದಾಳಿಗೆ ಬೆದರುವವನಲ್ಲ, ನಾವು ಎಐಎಡಿಎಂಕೆ ನಾಯಕರಲ್ಲ ಎಂಬುದನ್ನು ನರೇಂದ್ರ ಮೋದಿಯವರು ಮರೆಯಬಾರದು ಎಂದು ಡಿಎಂಕೆ ಮುಖಂಡ ಸ್ಟಾಲಿನ್ ತಮ್ಮ ಅಳಿಯ ಮತ್ತು ಮಗಳ ಮನೆ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯಿಸಿದ್ದಾರೆ.

ಪೆರಂಬಲೂರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, “ನಾನು ಇಂದು ಬೆಳಿಗ್ಗೆ ಚನ್ನೈನಿಂದ ತಿರುಚಿಗೆ ಬಂದಿದ್ದೇನೆ. ಚನ್ನೈನಲ್ಲಿನ ನನ್ನ ಮಗಳ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿ ತಿಳಿಯಿತು. ನರೇಂದ್ರ ಮೋದಿ ಸರ್ಕಾರ ತಮಿಳುನಾಡಿನಲ್ಲಿ ಎಐಎಡಿಎಂಕೆ ಸರ್ಕಾರವನ್ನು ಉಳಿಸಲು ಶತಪ್ರಯತ್ನ ಮಾಡುತ್ತಿದೆ. ನಾನು ನರೇಂದ್ರ ಮೋದಿಯವರಿಗೆ ಹೇಳಲು ಬಯಸುತ್ತೇನೆ, ಇದು ಡಿಎಂಕೆ ಪಕ್ಷ ಎಂಬುದನ್ನು ಮರೆಯಬೇಡಿ. ನಾನು ಕಲೈಜ್ಞರ್ (ಕರುಣಾನಿಧಿ)ಯವರ ಮಗ. ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಸ್ಟಾಲಿನ್ ಸವಾಲು ಹಾಕಿದ್ದಾರೆ.

ತಮಿಳುನಾಡು ಚುನಾವಣೆಗೆ 4 ದಿನ ಬಾಕಿ ಇರುವಂತೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮಗಳು ಸೆಂಥಮರಾಯ್, ಅಳಿಯ ಸಬರೀಸನ್ ವಾಸಿಸುತ್ತಿರುವ ನೀಲಂಗರೈನಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 06 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಈ ಐಟಿ ದಾಳಿ ನಡೆದಿರುವುದು ಹಲವರು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ತಿಂಗಳಷ್ಟೇ ಡಿಎಂಕೆ ಹಿರಿಯ ಮುಖಂಡ ಮತ್ತು ಅಭ್ಯರ್ಥಿ ಇ.ವಿ ವೇಲುರವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ಚುನಾವಣೆ ಹತ್ತಿರದಲ್ಲಿ ನಡೆದ ಐಟಿ ದಾಳಿಯನ್ನು ಖಂಡಿಸಿರುವ ಡಿಎಂಕೆ, “ಐಟಿ ಇಲಾಖೆಯು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೆರಿಗೆ ಅಧಿಕಾರಿಗಳು “ಎಐಎಡಿಎಂಕೆ-ಬಿಜೆಪಿಯ ಚುನಾವಣಾ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಡಿಎಂಕೆ ಆರೋಪಿಸಿದ್ದು, ತೆರಿಗೆ ಇಲಾಖೆಯನ್ನು ಉನ್ನತ ಸ್ಥಾನಕ್ಕೆ ತರಲು ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿದೆ.

ಇನ್ನು ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್, “ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ?” ಎಂದು ಸವಾಲು ಹಾಕಿದ್ದಾರೆ.

“ಅಮಿತ್ ಷಾ ಅವರ ಕೆಲಸವೆಂದರೆ ಇತರರನ್ನು ಬೆದರಿಸುವುದು ಮತ್ತು ಚುನಾಯಿತ ಸರ್ಕಾರಗಳನ್ನು ಉರುಳಿಸುವುದು… ನಾನು ಅವರಿಗೆ ಹೆದರುವುದಿಲ್ಲ, ನಾನು ಕಲೈಜ್ಞರ್ (ಕರುಣಾನಿಧಿ) ಯವರ ಮೊಮ್ಮಗ” ಎಂದು ಉದಯನಿಧಿ ಕಿಡಿಕಾರಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...