Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....