Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...