Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...