Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...