Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...