Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...