Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...