Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...