Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...