Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...