Homeಮುಖಪುಟನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

"ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ"

- Advertisement -
- Advertisement -

ಭಾರತದ ಅತಿ ದೊಡ್ಡ ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಕಚೇರಿ ಮೇಲಿನ ಐಟಿ ದಾಳಿಗೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ವಿರೋಧ ಪಕ್ಷದ ಮುಖಂಡರಾದ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಶಶಿ ತರೂರ್ ಸೇರಿದಂತೆ ಹಲವರು ತನ್ನ ವಿರುದ್ಧ ಮಾತನಾಡುವವರನ್ನು ಹಣಿಯುವ ಸರ್ಕಾರದ ಕೀಳು ಪ್ರಯತ್ನ ಎಂದು ಖಂಡಿಸಿದ್ದಾರೆ.

‘ಭಾಸ್ಕರ್ ನಿರ್ಭೀತ ಪತ್ರಿಕೋದ್ಯಮ ಮತ್ತು ಸತ್ಯವನ್ನು ಸಾರ್ವಜನಿಕರ ಮುಂದೆ ಇಟ್ಟಿದೆ. ನಾವು ಕಂಡಿದ್ದನ್ನು ವರದಿ ಮಾಡಿದ್ದೇವೆ. ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ’ ಎಂದು ದೈನಿಕ್ ಭಾಸ್ಕರ್ ಪ್ರತಿಕ್ರಿಯಿಸಿದೆ. “ನಾನು ಸ್ವತಂತ್ರ, ಏಕೆಂದರೆ ನಾನು ಭಾಸ್ಕರ್. ಓದುಗರ ವಿವೇಚನೆಯಿಂದ ಮಾತ್ರ ಭಾಸ್ಕರ್ ನಡೆಯುತ್ತದೆ” ಎಂದು ಅದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ ಎಂಬ ಸಂದೇಶ ಸಾರಿದೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಪತ್ರಿಕೆ ಮೇಲಿನ ದಾಳಿಯನ್ನು ವಿವಿಧ ರಾಜಕೀಯ ಮುಖಂಡರು ಖಂಡಿಸಿದ್ದಾರೆ. ಇದು ಸತ್ಯ ಹೇಳುವವರನ್ನು ಮೋದಿ ಸರ್ಕಾರ ನಡೆಸಿಕೊಳ್ಳುವ ರೀತಿ ಎಂದು ಟೀಕಿಸಿದ್ದಾರೆ.

ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮೇಲೆ ಐಟಿ ದಾಳಿ ಮಾಧ್ಯಮಗಳನ್ನು ಹೆದರಿಸುವ ಪ್ರಯತ್ನವಾಗಿದೆ. ಅವರ ಸಂದೇಶ ಸ್ಪಷ್ಟವಾಗಿದೆ – ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಬಿಡಲಾಗುವುದಿಲ್ಲ. ಅಂತಹ ಆಲೋಚನೆ ತುಂಬಾ ಅಪಾಯಕಾರಿ. ಪ್ರತಿಯೊಬ್ಬರೂ ಇದರ ವಿರುದ್ಧ ಧ್ವನಿ ಎತ್ತಬೇಕು. ಈ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾಧ್ಯಮಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. – ಅರವಿಂದ್ ಕೇಜ್ರಿವಾಲ್

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತೊಂದು ಬರ್ಬರ ಪ್ರಯತ್ನವಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟನ್ನು ತಪ್ಪಾಗಿ ನಿಭಾಯಿಸಿದರು ಮತ್ತು ಉಗ್ರ ಸಾಂಕ್ರಾಮಿಕದ ಮಧ್ಯೆ ದೇಶವನ್ನು ಅತ್ಯಂತ ಭಯಾನಕ ದಿನಗಳಿಗೆ ಕರೆದೊಯ್ದರು. ಇದನ್ನು ದೈನಿಕ್ ಭಾಸ್ಕರ್ ಧೈರ್ಯದಿಂದ ವರದಿ ಮಾಡಿದೆ. ಸತ್ಯವನ್ನು ಹೊರತರುವ ಧ್ವನಿಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಪ್ರತೀಕಾರಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಪ್ರಜಾಪ್ರಭುತ್ವದ ತತ್ವಗಳನ್ನು ಹಾಳುಮಾಡುವ ಗಂಭೀರ ಉಲ್ಲಂಘನೆಯಾಗಿದೆ. – ಮಮತಾ ಬ್ಯಾನರ್ಜಿ

ಲೆಕ್ಕವಿಲ್ಲದ COVID ಸಾವುಗಳನ್ನು ಲೆಕ್ಕಮಾಡಿದ ನಿಮ್ಮ ಮೇಲೆ ದಾಳಿ ಮಾಡುವ ಬದಲು ಪದಕ ನೀಡಬೇಕಿತ್ತು – ಬರ್ಖಾ ದತ್

“ದೈನಿಕ್ ಭಾಸ್ಕರ್ ಪತ್ರಿಕೆ ಮತ್ತು ಭಾರತ್ ಸಮಾಚಾರ್ ನ್ಯೂಸ್ ಚಾನೆಲ್ ಮೇಲೆ ಐಟಿ ದಾಳಿ ಮಾಧ್ಯಮಗಳ ಧ್ವನಿಯನ್ನು ನಿಗ್ರಹಿಸುವ ಒಂದು ಲಜ್ಜೆಗೆಟ್ಟ ಪ್ರಯತ್ನವಾಗಿದೆ. ಮೋದಿ ಸರ್ಕಾರವು ತನ್ನ ಟೀಕೆಗಳ ಒಂದು ಭಾಗವನ್ನು ಸಹ ಸಹಿಸಲಾರದು” – ಅಶೋಕ್ ಗೆಹ್ಲೋಟ್

ಸ್ಪಷ್ಟವಾದ, ಸಮಂಜಸ ಮತ್ತು ನಿರ್ಭೀತ ವರದಿಗಾರಿಕೆಯನ್ನು ಮೆಚ್ಚುವ ಕಾಲವೊಂದಿತ್ತು ಮತ್ತು ಸರ್ಕಾರಗಳಲ್ಲಿ ತಪ್ಪಿತಸ್ಥರನ್ನು ಬೆದರಿಸುವಂತಹ ಕಾಲವೊಂದಿತ್ತು. ಆದರೆ ಈಗ ಬೆದರಿಕೆ ಸರ್ಕಾರದ ಕಡೆಯಿಂದ ಬಂದಿದೆ. ಭಾರತವು ಅಭಿವೃದ್ಧಿ ಹೊಂದಲು ದೈನಿಕ್ ಭಾಸ್ಕರ್ ನಂತಹ ಪತ್ರಿಕೆಗಳು ಬೇಕಾಗುತ್ತವೆ. ನಾನು ಅವರೊಂದಿಗೆ ನಿಲ್ಲುತ್ತೇನೆ. – ಶಶಿ ತರೂರ್


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವತಂತ್ರವನ್ನು ಭಾರತದಲ್ಲಿ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂಬುದಕ್ಕೆ ಈ ದಾಳಿಗಳು ಸಾಕ್ಷಿಯಾಗಿದೆ. ತನ್ನ ದುರಾಡಳಿತವನ್ನು ಎಲ್ಲಿಯೂ ಬರೆಯದಂತೆ ತೆರೆಮರೆಯ ಗೋಮುಖ ವ್ಯಾಘ್ರನ ಮುಖ ಕಾಣದಂತೆ ಮಾಡುವ ತಂತ್ರಗಾರಿಕೆ ಈ ದಾಳಿ. ಪತ್ರಿಕೋದ್ಯಮದ ಮೇಲೆ ನಡೆಯುತ್ತಿರುವ ಈ ದಾಳಿಗಳು ತುರ್ತು ಪರಿಸ್ಥಿತಿಯನ್ನು ಮೀರಿಸುವಂತ ಸಂದಿಗ್ದ ಪರಿಸ್ಥಿತಿಗಳನ್ನು ದೇಶದ ಪ್ರತಿಯೊಂದು ಕ್ಷೇತ್ರವೂ ಎದುರಿಸುವಂತಾಗಿದೆ. ನಿರ್ಭೀತ ನಡೆಯ ದೈನಿಕ್ ಭಾಸ್ಕರ್ ಜೊತೆ ನಾವಿದ್ದೇವೆ. ಇಂತಹ ಗೊಡ್ಡು ಬೆದತಿಕೆಗಳಿಗೆ ಅಂಜದೆ ಮುನ್ನುಗ್ಗಿ.

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...