Homeಕರ್ನಾಟಕಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

- Advertisement -
- Advertisement -

ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರಾಜೀನಾಮೆ ಚರ್ಚೆಗೆ ತೆರೆ ಎಳೆದಿದ್ದಾರೆ.

ಹಾಸನದಲ್ಲಿ ಶುಕ್ರವಾರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ’ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕಳೆದ ವಾರವಷ್ಟೇ ಹೈಕಮಾಂಡ್ ಸೂಚಿಸಿದರೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಹಲವು ಚರ್ಚೆಗೆ ಕಾರಣವಾಗಿದ್ದು, ಹೈಕಮಾಂಡ್ ಎಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತಾರೋ ಅಲ್ಲಿಯವರೇಗು ಸ್ಥಾನದಲ್ಲಿ ಮುಂದುವರೆಯುತ್ತೇನೆ. ಯಾವಾಗ ರಾಜೀನಾಮೆ ನೀಡಲು ಹೇಳುತ್ತಾರೋ ಆಗಲೇ ಕೊಡುತ್ತೇನೆ’ ಎಂದಿದ್ದರು.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

’ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂದು ನಾನು ಹೇಳುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ. ಆಯಾ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಡುತ್ತೇನೆ’ ಎಂದು ಹೇಳಿದ್ದರು.

ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಕಿತ್ತುಹಾಕಲು ಹೈಕಮಾಂಡ್, ರಾಜ್ಯದ ನಾಯಕರು ಸಿದ್ದರಿದ್ದಾರೆ. ಆದರೆ ಪರ್ಯಾಯ ನಾಯಕರು ಆ ಪಕ್ಷದಲ್ಲಿ ಇಲ್ಲ. ನಾಯಕತ್ವ ದಿವಾಳಿಯಾಗಿದೆ. ಅದಕ್ಕೆ ಒದ್ದಾಡುತ್ತಿದ್ದಾರೆ ಎಂದು ಹೇಳಿದ್ದರು.

’ರಾಜಕಾರಣದಲ್ಲಿ ನಾನಾ ತಂತ್ರಗಾರಿಕೆ ಇರುತ್ತವೆ. ಹಾಗೆಯೇ ಯಡಿಯೂರಪ್ಪನವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರಗಾರಿಕೆ ಇದೆ. ಯಡಿಯೂರಪ್ಪ ಗಟ್ಟಿ ಮನುಷ್ಯ, ಅವರ ಹೇಳಿಕೆಯನ್ನು ಎರಡು-ಮೂರು ರೀತಿಯಲ್ಲಿ ವಿಶ್ಲೇಷಿಸಬಹದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದರು.

ನಾನೇ ಮುಂದಿನ ಎರಡು ವರ್ಷಕ್ಕೆ ಸಿಎಂ ಎನ್ನುವ ಮೂಲಕ ಈಗ ಎಲ್ಲಾ ಚರ್ಚೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದಾರೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...