Homeಮುಖಪುಟಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ "ಮುಸ್ಲಿಂಲೈವ್ಸ್‌ಮ್ಯಾಟರ್" ಎಂದಿದ್ದಾರೆ. ಅದೇ ರೀತಿ "ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ" ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

- Advertisement -
- Advertisement -

ಅಕ್ರಮ ಗೋಮಾಂಸ ಸಾಗಾಟದ ಆರೋಪದಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಸಂತ್ರಸ್ತ ಲುಕ್ಮನ್ ಖಾನ್ (25) ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶುಕ್ರವಾರ ನಡೆದ ಘಟನೆಯನ್ನು ನೆನಪಿಸಿಕೊಂಡಿರುವ ಅವರು ‘ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು’ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

“ಅದು ಹಸುವಿನ ಮಾಂಸವಲ್ಲ, ಎಮ್ಮೆ ಮಾಂಸ. ಒಂದು ವೇಳೆ ಅದು ಹಸುವಿನ ಮಾಂಸವಾಗಿದ್ದರೆ ನಾನೀಗಲೇ ಪ್ರಾಣ ಕೊಡಲು ಸಿದ್ದನಿದ್ದೇನೆ ಎಂದು ಹೇಳಿದೆ. ಆದರೆ ಅವರು ಜೈ ಶ್ರೀರಾಮ್‌ ಎನ್ನುವಂತೆ ನನ್ನನ್ನು ಒತ್ತಾಯಿಸಿದರು. ಸರಳುಗಳು ಮತ್ತು ಸುತ್ತಿಗೆಯಿಂದ ಬಡಿದರು” ಎಂದು ಲುಕ್ಮನ್ ಖಾನ್ ಹೇಳಿದ್ದಾರೆ.

ನಾನು ಹಲವು ವರ್ಷಗಳಿಂದ ಗುರ್ಗಾವ್‌ ಬಳಿಯ ಸದರ್ ಬಜಾರ್‌ ಮಾರುಕಟ್ಟೆಗೆ ಎಮ್ಮೆ ಮಾಂಸ ಪೂರೈಸುತ್ತಿದ್ದೇನೆ. ಯಥಾ ಪ್ರಕಾರ ಶುಕ್ರವಾರವೂ ಸಹ ಟ್ರಕ್‌ನಲ್ಲಿ ಹೊರಟಿದ್ದಾಗ ಹಲವಾರು ಜನ ನನ್ನನ್ನು ತಡೆದು ಮನಬಂದಂತೆ ಥಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನನ್ನನ್ನು ಟ್ರಕ್‌ನಲ್ಲಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಥಳಿಸಿದರು. ಹಲ್ಲೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಹಲವಾರು ಸಾಮಾಜಿಕ ಕಾರ್ಯಕರ್ತರು ವಿರೋಧಿಸಿದ್ದಾರೆ. ದಲಿತ ಹೋರಾಟಗಾರ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ “ಮತ್ತೆ ರಾಮನ ಹೆಸರಿನಲ್ಲಿ ಹಲ್ಲೆ” ಎಂದು ಟೀಕಿಸಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ “ಮುಸ್ಲಿಂಲೈವ್ಸ್‌ಮ್ಯಾಟರ್” ಎಂದಿದ್ದಾರೆ. ಅದೇ ರೀತಿ “ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ” ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ, ಈ ಘಟನೆಗೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ”ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ನಾವು ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...