Homeಮುಖಪುಟಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ "ಮುಸ್ಲಿಂಲೈವ್ಸ್‌ಮ್ಯಾಟರ್" ಎಂದಿದ್ದಾರೆ. ಅದೇ ರೀತಿ "ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ" ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

- Advertisement -
- Advertisement -

ಅಕ್ರಮ ಗೋಮಾಂಸ ಸಾಗಾಟದ ಆರೋಪದಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಸಂತ್ರಸ್ತ ಲುಕ್ಮನ್ ಖಾನ್ (25) ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶುಕ್ರವಾರ ನಡೆದ ಘಟನೆಯನ್ನು ನೆನಪಿಸಿಕೊಂಡಿರುವ ಅವರು ‘ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು’ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

“ಅದು ಹಸುವಿನ ಮಾಂಸವಲ್ಲ, ಎಮ್ಮೆ ಮಾಂಸ. ಒಂದು ವೇಳೆ ಅದು ಹಸುವಿನ ಮಾಂಸವಾಗಿದ್ದರೆ ನಾನೀಗಲೇ ಪ್ರಾಣ ಕೊಡಲು ಸಿದ್ದನಿದ್ದೇನೆ ಎಂದು ಹೇಳಿದೆ. ಆದರೆ ಅವರು ಜೈ ಶ್ರೀರಾಮ್‌ ಎನ್ನುವಂತೆ ನನ್ನನ್ನು ಒತ್ತಾಯಿಸಿದರು. ಸರಳುಗಳು ಮತ್ತು ಸುತ್ತಿಗೆಯಿಂದ ಬಡಿದರು” ಎಂದು ಲುಕ್ಮನ್ ಖಾನ್ ಹೇಳಿದ್ದಾರೆ.

ನಾನು ಹಲವು ವರ್ಷಗಳಿಂದ ಗುರ್ಗಾವ್‌ ಬಳಿಯ ಸದರ್ ಬಜಾರ್‌ ಮಾರುಕಟ್ಟೆಗೆ ಎಮ್ಮೆ ಮಾಂಸ ಪೂರೈಸುತ್ತಿದ್ದೇನೆ. ಯಥಾ ಪ್ರಕಾರ ಶುಕ್ರವಾರವೂ ಸಹ ಟ್ರಕ್‌ನಲ್ಲಿ ಹೊರಟಿದ್ದಾಗ ಹಲವಾರು ಜನ ನನ್ನನ್ನು ತಡೆದು ಮನಬಂದಂತೆ ಥಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನನ್ನನ್ನು ಟ್ರಕ್‌ನಲ್ಲಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಥಳಿಸಿದರು. ಹಲ್ಲೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಹಲವಾರು ಸಾಮಾಜಿಕ ಕಾರ್ಯಕರ್ತರು ವಿರೋಧಿಸಿದ್ದಾರೆ. ದಲಿತ ಹೋರಾಟಗಾರ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ “ಮತ್ತೆ ರಾಮನ ಹೆಸರಿನಲ್ಲಿ ಹಲ್ಲೆ” ಎಂದು ಟೀಕಿಸಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ “ಮುಸ್ಲಿಂಲೈವ್ಸ್‌ಮ್ಯಾಟರ್” ಎಂದಿದ್ದಾರೆ. ಅದೇ ರೀತಿ “ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ” ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ, ಈ ಘಟನೆಗೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ”ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ನಾವು ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...