Homeಮುಖಪುಟ'ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ' : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ ಲಭ್ಯವಿತ್ತು ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪುಸ್ತಕದ ಬಿಡುಗಡೆ ಮತ್ತು ಲಭ್ಯತೆಯ ಕುರಿತು ಪ್ರಕಾಶಕರು ನೀಡುತ್ತಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿದ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ. ಪೆಂಗ್ವಿನ್ ಹೌಸ್ ನರವಾಣೆ ಅವರ ಪುಸ್ತಕವು ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಎಲ್ಲಿಯೂ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ. ಆದರೆ, ಇದನ್ನು ನಿರಾಕರಿಸಿದ ರಾಹುಲ್ ಗಾಂಧಿ, 2023ರಲ್ಲಿ ಜನರಲ್ ನರವಾಣೆ ಅವರು ಮಾಡಿದ್ದ ಟ್ವೀಟ್‌ ಅನ್ನು ಉಲ್ಲೇಖಿಸಿದ್ದು, “ನನ್ನ ಪುಸ್ತಕ ಈಗ ಲಭ್ಯವಿದೆ” ಎಂದು ಸ್ವತಃ ನರವಾಣೆ ಅವರೇ ತಿಳಿಸಿದ್ದರು ಎಂದು ನೆನಪಿಸಿದ್ದಾರೆ.

“ಒಂದೋ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ, ಇಲ್ಲಾ ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುತ್ತಿರಬೇಕು; ನಾನು ಪೆಂಗ್ವಿನ್ ಸಂಸ್ಥೆಗಿಂತ ಜನರಲ್ ನರವಾಣೆ ಅವರ ಮಾತನ್ನೇ ನಂಬುತ್ತೇನೆ” ಎಂದು ರಾಹುಲ್ ಹೇಳಿದ್ದಾರೆ. ಈ ಪುಸ್ತಕವು ಅಮೆಜಾನ್‌ನಂತಹ ತಾಣಗಳಲ್ಲಿ ಲಭ್ಯವಿತ್ತು ಎಂಬುದು ರಾಹುಲ್ ಗಾಂಧಿ ಅವರ ವಾದವಾಗಿದ್ದು, ಮೋದಿ ಸರ್ಕಾರದ ಬಗೆಗಿನ ಕೆಲವು ” ಸತ್ಯಗಳನ್ನು” ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪುಸ್ತಕ ಲಭ್ಯವಿತ್ತು ಎಂಬ ನರವಾಣೆ ಅವರ ಹಿಂದಿನ ಟ್ವೀಟ್ ಸತ್ಯವಾಗಿದ್ದರೆ, ಈಗ ಪುಸ್ತಕ ಲಭ್ಯವೇ ಇಲ್ಲ ಎನ್ನುತ್ತಿರುವ ಪ್ರಕಾಶಕರ ಮಾತು ಸುಳ್ಳಾಗಿರಬೇಕು ಎಂಬುವುದು ರಾಹುಲ್ ಗಾಂಧಿಯವರ ತರ್ಕವಾಗಿದೆ.

“ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ,” ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಜುಗರ ಉಂಟುಮಾಡುವಂತಹ ಕೆಲವು ವಿಚಾರಗಳು ನರವಾಣೆ ಅವರ ಪುಸ್ತಕದಲ್ಲಿದೆ. ಹಾಗಾಗಿ, ಖಂಡಿತವಾಗಿಯೂ, ಇಲ್ಲಿ ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಸತ್ಯ ಹೇಳುತ್ತಿದೆಯೇ ಅಥವಾ ಮಾಜಿ ಸೇನಾ ಮುಖ್ಯಸ್ಥರು ಸತ್ಯ ಹೇಳುತ್ತಿದ್ದಾರೆಯೇ ಎಂಬುದನ್ನು ನೀವೇ ನಿರ್ಧರಿಸಬೇಕು. ಸದ್ಯದ ಮುಖ್ಯವಾದ ವಿಚಾರವೇ ಇದು,” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು ಹೇಳಿಕೆ ನೀಡಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಆತ್ಮಕಥೆಯ ವಿಶೇಷ ಪ್ರಕಟಣಾ ಹಕ್ಕುಗಳನ್ನು ತಾವು ಹೊಂದಿರುವುದಾಗಿ ತಿಳಿಸಿದೆ. ಮಾರುಕಟ್ಟೆಯಲ್ಲಿ ಅನಧಿಕೃತ ಪ್ರತಿಗಳು ಲಭ್ಯವಿವೆ ಎಂಬ ವರದಿಗಳ ನಡುವೆ, ಈ ಪುಸ್ತಕವು ಇದುವರೆಗೆ ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಅಧಿಕೃತವಾಗಿ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...