Homeಮುಖಪುಟ'ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ' : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ ಲಭ್ಯವಿತ್ತು ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪುಸ್ತಕದ ಬಿಡುಗಡೆ ಮತ್ತು ಲಭ್ಯತೆಯ ಕುರಿತು ಪ್ರಕಾಶಕರು ನೀಡುತ್ತಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿದ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ. ಪೆಂಗ್ವಿನ್ ಹೌಸ್ ನರವಾಣೆ ಅವರ ಪುಸ್ತಕವು ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಎಲ್ಲಿಯೂ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ. ಆದರೆ, ಇದನ್ನು ನಿರಾಕರಿಸಿದ ರಾಹುಲ್ ಗಾಂಧಿ, 2023ರಲ್ಲಿ ಜನರಲ್ ನರವಾಣೆ ಅವರು ಮಾಡಿದ್ದ ಟ್ವೀಟ್‌ ಅನ್ನು ಉಲ್ಲೇಖಿಸಿದ್ದು, “ನನ್ನ ಪುಸ್ತಕ ಈಗ ಲಭ್ಯವಿದೆ” ಎಂದು ಸ್ವತಃ ನರವಾಣೆ ಅವರೇ ತಿಳಿಸಿದ್ದರು ಎಂದು ನೆನಪಿಸಿದ್ದಾರೆ.

“ಒಂದೋ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ, ಇಲ್ಲಾ ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುತ್ತಿರಬೇಕು; ನಾನು ಪೆಂಗ್ವಿನ್ ಸಂಸ್ಥೆಗಿಂತ ಜನರಲ್ ನರವಾಣೆ ಅವರ ಮಾತನ್ನೇ ನಂಬುತ್ತೇನೆ” ಎಂದು ರಾಹುಲ್ ಹೇಳಿದ್ದಾರೆ. ಈ ಪುಸ್ತಕವು ಅಮೆಜಾನ್‌ನಂತಹ ತಾಣಗಳಲ್ಲಿ ಲಭ್ಯವಿತ್ತು ಎಂಬುದು ರಾಹುಲ್ ಗಾಂಧಿ ಅವರ ವಾದವಾಗಿದ್ದು, ಮೋದಿ ಸರ್ಕಾರದ ಬಗೆಗಿನ ಕೆಲವು ” ಸತ್ಯಗಳನ್ನು” ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪುಸ್ತಕ ಲಭ್ಯವಿತ್ತು ಎಂಬ ನರವಾಣೆ ಅವರ ಹಿಂದಿನ ಟ್ವೀಟ್ ಸತ್ಯವಾಗಿದ್ದರೆ, ಈಗ ಪುಸ್ತಕ ಲಭ್ಯವೇ ಇಲ್ಲ ಎನ್ನುತ್ತಿರುವ ಪ್ರಕಾಶಕರ ಮಾತು ಸುಳ್ಳಾಗಿರಬೇಕು ಎಂಬುವುದು ರಾಹುಲ್ ಗಾಂಧಿಯವರ ತರ್ಕವಾಗಿದೆ.

“ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ,” ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಜುಗರ ಉಂಟುಮಾಡುವಂತಹ ಕೆಲವು ವಿಚಾರಗಳು ನರವಾಣೆ ಅವರ ಪುಸ್ತಕದಲ್ಲಿದೆ. ಹಾಗಾಗಿ, ಖಂಡಿತವಾಗಿಯೂ, ಇಲ್ಲಿ ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಸತ್ಯ ಹೇಳುತ್ತಿದೆಯೇ ಅಥವಾ ಮಾಜಿ ಸೇನಾ ಮುಖ್ಯಸ್ಥರು ಸತ್ಯ ಹೇಳುತ್ತಿದ್ದಾರೆಯೇ ಎಂಬುದನ್ನು ನೀವೇ ನಿರ್ಧರಿಸಬೇಕು. ಸದ್ಯದ ಮುಖ್ಯವಾದ ವಿಚಾರವೇ ಇದು,” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು ಹೇಳಿಕೆ ನೀಡಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಆತ್ಮಕಥೆಯ ವಿಶೇಷ ಪ್ರಕಟಣಾ ಹಕ್ಕುಗಳನ್ನು ತಾವು ಹೊಂದಿರುವುದಾಗಿ ತಿಳಿಸಿದೆ. ಮಾರುಕಟ್ಟೆಯಲ್ಲಿ ಅನಧಿಕೃತ ಪ್ರತಿಗಳು ಲಭ್ಯವಿವೆ ಎಂಬ ವರದಿಗಳ ನಡುವೆ, ಈ ಪುಸ್ತಕವು ಇದುವರೆಗೆ ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಅಧಿಕೃತವಾಗಿ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...