Homeಮುಖಪುಟ'2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ...!' - ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್...

‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್ ಬಿದರಿ

ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ನೀವು...!

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿಯವರ ವಿರುದ್ಧ ವಿಷಾದ ವ್ಯಕ್ತಪಡಿಸಿರುವ ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ, ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ನಿಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲಾರಾಗಿದ್ದೀರಿ” ಎಂದು ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ.

“ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ರದ್ದತಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

“ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ಅವರು ಮಾಡಿದ ಈ ರಾಷ್ಟ್ರೀಯ ಸೊತ್ತುಗಳು ಇಷ್ಟು ಬೇಗ ವಿದೇಶಿ ಕಂಪನಿಗಳಿಗೆ ಮಾರಾಟಕ್ಕೆ ಬರಲಿವೆ ಎಂದು ಊಹಿಸಿರಲಿಲ್ಲ” ಎಂದು ಮೋದಿ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

“ನೋಟ್ ಬ್ಯಾನ್ ನಂತರ ಕೋಟಿಗಟ್ಟಲೆ ಹಣ ಕರ್ನಾಟಕದ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಹಾಗೂ ಇನ್ನಿತರ ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ ವಿನಿಯಮವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಆರ್‌ಬಿಐ ತೆಗೆದುಕೊಂಡ ಕ್ರಮವಾದರೂ ಏನು?” ಎಂದು ಪ್ರಶ್ನಿಸಿದ್ದಾರೆ.

“1999ರಿಂದಲೂ ಕೃಷ್ಣಾ ನದಿ ಕಣಿವೆ ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡಿದೆ. ಆ ಸಂದರ್ಭ ಮೋದಿಯವರು ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಾವು ಅವರನ್ನು ನಂಬಿದ್ದೆವು. ಆದರೆ ಏಳು ವರ್ಷಗಳು ಕಳೆದವು. ಇಂದಿಗೂ ಕರ್ನಾಟಕಕ್ಕೆ ಮೀಸಲಾದ 300 ಟಿಎಂಸಿ ನೀರು ವ್ಯರ್ಥವಾಗಿ ಹೋಗುತ್ತಿದೆ” ಎಂದು ಬಿದರಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

“ನೀವೂ ವಿಫಲರಾದಿರಿ ಮೋದಿ: ಭ್ರಷ್ಟಾಚಾರ ಹಾಗೂ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳನ್ನು ಈ ವ್ಯವಸ್ಥೆಯಿಂದ ಮೋದಿಯವರು ತೆಗೆದು ಹಾಕುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಏಳು ವರ್ಷಗಳು ಕಳೆದು ಹೋದವು. ನಿಮ್ಮ ಭರವಸೆಗಳು ಸುಳ್ಳಾಗಿವೆ. ನೀವೂ ವಿಫಲರಾಗಿದ್ದೀರಿ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಜೀವನಕ್ಕೆ ಕಾಲಿಡುವುದು ಸಾರ್ವಜನಿಕರಿಗೆ ಏನಾದರೂ ಒಳ್ಳೆದನ್ನು ಮಾಡುವ ಸಲುವಾಗಿ. ಅವರು ಅದನ್ನು ಮಾಡದಿದ್ದರೆ, ತಾವೇ ಸಾರ್ವಜನಿಕ ಜೀವನದಿಂದ ಹೊರನಡೆಯಬೇಕು. ತಮಗೆ, ಸಾರ್ವಜನಿಕರಿಗೆ ಮತ್ತು ದೇಶಕ್ಕೆ ಮೋಸ ಮಾಡುವುದನ್ನು ಮುಂದುವರೆಸಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...