Homeಮುಖಪುಟ'2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ...!' - ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್...

‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್ ಬಿದರಿ

ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ನೀವು...!

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿಯವರ ವಿರುದ್ಧ ವಿಷಾದ ವ್ಯಕ್ತಪಡಿಸಿರುವ ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ, ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ನಿಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲಾರಾಗಿದ್ದೀರಿ” ಎಂದು ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ.

“ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ರದ್ದತಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

“ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ಅವರು ಮಾಡಿದ ಈ ರಾಷ್ಟ್ರೀಯ ಸೊತ್ತುಗಳು ಇಷ್ಟು ಬೇಗ ವಿದೇಶಿ ಕಂಪನಿಗಳಿಗೆ ಮಾರಾಟಕ್ಕೆ ಬರಲಿವೆ ಎಂದು ಊಹಿಸಿರಲಿಲ್ಲ” ಎಂದು ಮೋದಿ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

“ನೋಟ್ ಬ್ಯಾನ್ ನಂತರ ಕೋಟಿಗಟ್ಟಲೆ ಹಣ ಕರ್ನಾಟಕದ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಹಾಗೂ ಇನ್ನಿತರ ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ ವಿನಿಯಮವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಆರ್‌ಬಿಐ ತೆಗೆದುಕೊಂಡ ಕ್ರಮವಾದರೂ ಏನು?” ಎಂದು ಪ್ರಶ್ನಿಸಿದ್ದಾರೆ.

“1999ರಿಂದಲೂ ಕೃಷ್ಣಾ ನದಿ ಕಣಿವೆ ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡಿದೆ. ಆ ಸಂದರ್ಭ ಮೋದಿಯವರು ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಾವು ಅವರನ್ನು ನಂಬಿದ್ದೆವು. ಆದರೆ ಏಳು ವರ್ಷಗಳು ಕಳೆದವು. ಇಂದಿಗೂ ಕರ್ನಾಟಕಕ್ಕೆ ಮೀಸಲಾದ 300 ಟಿಎಂಸಿ ನೀರು ವ್ಯರ್ಥವಾಗಿ ಹೋಗುತ್ತಿದೆ” ಎಂದು ಬಿದರಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

“ನೀವೂ ವಿಫಲರಾದಿರಿ ಮೋದಿ: ಭ್ರಷ್ಟಾಚಾರ ಹಾಗೂ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳನ್ನು ಈ ವ್ಯವಸ್ಥೆಯಿಂದ ಮೋದಿಯವರು ತೆಗೆದು ಹಾಕುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಏಳು ವರ್ಷಗಳು ಕಳೆದು ಹೋದವು. ನಿಮ್ಮ ಭರವಸೆಗಳು ಸುಳ್ಳಾಗಿವೆ. ನೀವೂ ವಿಫಲರಾಗಿದ್ದೀರಿ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಜೀವನಕ್ಕೆ ಕಾಲಿಡುವುದು ಸಾರ್ವಜನಿಕರಿಗೆ ಏನಾದರೂ ಒಳ್ಳೆದನ್ನು ಮಾಡುವ ಸಲುವಾಗಿ. ಅವರು ಅದನ್ನು ಮಾಡದಿದ್ದರೆ, ತಾವೇ ಸಾರ್ವಜನಿಕ ಜೀವನದಿಂದ ಹೊರನಡೆಯಬೇಕು. ತಮಗೆ, ಸಾರ್ವಜನಿಕರಿಗೆ ಮತ್ತು ದೇಶಕ್ಕೆ ಮೋಸ ಮಾಡುವುದನ್ನು ಮುಂದುವರೆಸಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...