Homeಮುಖಪುಟ'2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ...!' - ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್...

‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್ ಬಿದರಿ

ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ನೀವು...!

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿಯವರ ವಿರುದ್ಧ ವಿಷಾದ ವ್ಯಕ್ತಪಡಿಸಿರುವ ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ, ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ನಿಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲಾರಾಗಿದ್ದೀರಿ” ಎಂದು ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ.

“ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ರದ್ದತಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

“ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ಅವರು ಮಾಡಿದ ಈ ರಾಷ್ಟ್ರೀಯ ಸೊತ್ತುಗಳು ಇಷ್ಟು ಬೇಗ ವಿದೇಶಿ ಕಂಪನಿಗಳಿಗೆ ಮಾರಾಟಕ್ಕೆ ಬರಲಿವೆ ಎಂದು ಊಹಿಸಿರಲಿಲ್ಲ” ಎಂದು ಮೋದಿ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

“ನೋಟ್ ಬ್ಯಾನ್ ನಂತರ ಕೋಟಿಗಟ್ಟಲೆ ಹಣ ಕರ್ನಾಟಕದ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಹಾಗೂ ಇನ್ನಿತರ ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ ವಿನಿಯಮವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಆರ್‌ಬಿಐ ತೆಗೆದುಕೊಂಡ ಕ್ರಮವಾದರೂ ಏನು?” ಎಂದು ಪ್ರಶ್ನಿಸಿದ್ದಾರೆ.

“1999ರಿಂದಲೂ ಕೃಷ್ಣಾ ನದಿ ಕಣಿವೆ ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡಿದೆ. ಆ ಸಂದರ್ಭ ಮೋದಿಯವರು ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಾವು ಅವರನ್ನು ನಂಬಿದ್ದೆವು. ಆದರೆ ಏಳು ವರ್ಷಗಳು ಕಳೆದವು. ಇಂದಿಗೂ ಕರ್ನಾಟಕಕ್ಕೆ ಮೀಸಲಾದ 300 ಟಿಎಂಸಿ ನೀರು ವ್ಯರ್ಥವಾಗಿ ಹೋಗುತ್ತಿದೆ” ಎಂದು ಬಿದರಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

“ನೀವೂ ವಿಫಲರಾದಿರಿ ಮೋದಿ: ಭ್ರಷ್ಟಾಚಾರ ಹಾಗೂ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳನ್ನು ಈ ವ್ಯವಸ್ಥೆಯಿಂದ ಮೋದಿಯವರು ತೆಗೆದು ಹಾಕುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಏಳು ವರ್ಷಗಳು ಕಳೆದು ಹೋದವು. ನಿಮ್ಮ ಭರವಸೆಗಳು ಸುಳ್ಳಾಗಿವೆ. ನೀವೂ ವಿಫಲರಾಗಿದ್ದೀರಿ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಜೀವನಕ್ಕೆ ಕಾಲಿಡುವುದು ಸಾರ್ವಜನಿಕರಿಗೆ ಏನಾದರೂ ಒಳ್ಳೆದನ್ನು ಮಾಡುವ ಸಲುವಾಗಿ. ಅವರು ಅದನ್ನು ಮಾಡದಿದ್ದರೆ, ತಾವೇ ಸಾರ್ವಜನಿಕ ಜೀವನದಿಂದ ಹೊರನಡೆಯಬೇಕು. ತಮಗೆ, ಸಾರ್ವಜನಿಕರಿಗೆ ಮತ್ತು ದೇಶಕ್ಕೆ ಮೋಸ ಮಾಡುವುದನ್ನು ಮುಂದುವರೆಸಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...