Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...