Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...